ಸ್ಪೇನ್‌ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳು ಅರೆಸ್ಟ್

ನವದೆಹಲಿ: ಸ್ಪೇನ್‌ ಮೂಲದ ಮಹಿಳೆಯ ಮೇಲೆ ಏಳು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶುಕ್ರವಾರ ರಾತ್ರಿ ಜಾರ್ಖಂಡ್‌ ರಾಜಧಾನಿ ರಾಂಚಿಯಿಂದ 300 ಕಿ.ಮೀ ದೂರದಲ್ಲಿರುವ ಡುಮ್ಕಾದಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮಹಿಳೆ ಇನ್‌ಸ್ಟ್ರಾಗಮ್‌ ಈ ಸಂಬಂಧ ಭಯಾನಕ ಅನುಭವವನ್ನು ವಿವರಿಸಿದ್ದಾಳೆ. ಏಳು ಪುರುಷರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆರಂಭದಲ್ಲಿ ಹೊಡೆದು ಬಡಿದು ನಮ್ಮ ವಸ್ತುಗಳನ್ನು ದರೋಡೆ ಮಾಡಿದರು. ನಂತರ ನನ್ನ ಮೇಲೆ ಅತ್ಯಾಚಾರ ಎಸಗಿದರು ಎಂದು ಮಹಿಳೆ ತಿಳಿಸಿದ್ದಾರೆ.

ಈ ದಂಪತಿ ಬಾಂಗ್ಲಾದೇಶದಿಂದ ಎರಡು ಬೈಕ್‌ಗಳಲ್ಲಿ ಆಗಮಿಸಿ ಬಿಹಾರದ ಮೂಲದ ನೇಪಾಳಕ್ಕೆ ಹೋಗಲು ಮುಂದಾಗಿದ್ದರು. ಡುಮ್ಕಾದಲ್ಲಿ ಹೊರ ಭಾಗದಲ್ಲಿ ತಾತ್ಕಾಲಿಕ ಟೆಂಟ್‌ನಲ್ಲಿ ತಂಗಿದ್ದಾಗ 7 ಮಂದಿ ಆಗಮಿಸಿ ದರೋಡೆ ಮಾಡಿ ಥಳಿಸಿದ್ದು ಅಲ್ಲದೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ.  ಇದೀಗ ಪ್ರಕರಣದಲ್ಲಿ ಭಾಗಿಯಾಗಿದ್ದ 3 ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದಕ್ಕೆ ಸ್ಪೇನ್​​​ ರಾಯಭಾರಿ ಕಚೇರಿ ಭಾರತಕ್ಕೆ ಧನ್ಯವಾದ ಹೇಳಿದೆ.

ಈ ಬಗ್ಗೆ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿರುವ ರಾಯಭಾರಿ ಅಧಿಕಾರಿಗಳು, “ನಿಮ್ಮ ಬೆಂಬಲಕ್ಕಾಗಿ ಧನ್ಯವಾದಗಳು. ಪ್ರಪಂಚದ ಎಲ್ಲೆಡೆ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೊನೆಗೊಳಿಸುವ ಬದ್ಧತೆಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕಾಗಿದೆ” ಎಂದು ಹೇಳಿದ್ದಾರೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago