ಲಕ್ನೋ: ಪ್ರಧಾನಿ ಮೋದಿ ಅವರು ಇಂದು (ಫೆ.19) ಉತ್ತರಪ್ರದೇಶದ ಸಂಭಾಲ್ನಲ್ಲಿ ಹಿಂದೂ ದೇಗುಲ ಕಲ್ಕಿ ಧಾಮ್ನ ಶಂಕುಸ್ಥಾಪನೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಜತೆಗೆ ಉತ್ತರ ಪ್ರದೇಶದಸಿಎಂ ಯೋಗಿ ಆದಿತ್ಯನಾಥ್ ಹಾಗೂ ಶ್ರೀ ಕಲ್ಕಿ ಧಾಮ ನಿರ್ಮಾಣ ಟ್ರಸ್ಟ್ನ ಅಧ್ಯಕ್ಷ ಆಚಾರ್ಯ ಪ್ರಮೋದ್ ಕೃಷ್ಣಂ ಉಪಸ್ಥಿತರಿದ್ದರು.
ಇನ್ನು ಮೋದಿ ಅವರು ಭಕ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಸಭಾ ವೇದಿಕೆಯಲ್ಲಿ ಅನೇಕ ಸಂತರು ಕೂಡ ಭಾಗಿಯಾಗಿದ್ದಾರೆ. ಇಂದು, ಉತ್ತರ ಪ್ರದೇಶದ ನೆಲದಲ್ಲಿ ಭಕ್ತಿ, ಭಾವನೆ ಮತ್ತು ಆಧ್ಯಾತ್ಮಿಕತೆಯ ಮತ್ತೊಂದು ಹೊಳೆ ಹರಿಯಲು ಸಿದ್ಧವಾಗಿದೆ. ಸಂತರ ಭಕ್ತಿ ಮತ್ತು ಜನರ ಉತ್ಸಾಹದಿಂದ ಮತ್ತೊಂದು ಪವಿತ್ರ ಸ್ಥಳದ ಅಡಿಪಾಯ ಹಾಕಲಾಗುತ್ತಿದೆ.
ನಿಮ್ಮೆಲ್ಲರ ಸಮ್ಮುಖದಲ್ಲಿ ಭವ್ಯವಾದ ಕಲ್ಕಿ ಧಾಮದ ಶಿಲಾನ್ಯಾಸವನ್ನು ನೆರವೇರಿಸುವ ಮೂಲಕ ಕಲ್ಕಿಧಾಮವು ಮತ್ತೊಂದು ಶ್ರೇಷ್ಠ ನಂಬಿಕೆಯ ಕೇಂದ್ರವಾಗಿ ಹೊರಹೊಮ್ಮಲಿದೆ. ಹಾಗೂ ಇಂದು ಪುಣ್ಯ ದಿನ ಛತ್ರಪತಿ ಶಿವಾಜಿ ಮಹಾರಾಜರ ಜನ್ಮದಿನವೂ ಆಗಿದೆ ಎಂದರು. ಇದು ಭಾರತ ಕಾಣುತ್ತಿರುವ ಸಾಂಸ್ಕೃತಿಕ ಪುನರುಜ್ಜೀವನ ಮತ್ತು ನಮ್ಮ ಅಸ್ಮಿತೆಯ ಬಗ್ಗೆ ಹೆಮ್ಮೆ ಪಡುವ ಕ್ಷಣ. ನಮ್ಮ ಸಾಂಸ್ಕೃತಿಯನ್ನು ನೆನಪಿಸಿಕೊಳ್ಳಬೇಕಿದೆ. ಇದನ್ನು ಛತ್ರಪತಿ ಶಿವಾಜಿ ಮಹಾರಾಜರ ದಿನದ ನೆನಪಿಸಿಕೊಳ್ಳುವುದು ಮತ್ತಷ್ಟು ಉತ್ತಮ ಎಂದರು.
ಇನ್ನು ಇದರ ಜತೆಗೆ ಪ್ರಧಾನಿ ಮೋದಿ ಅವರು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023ರಲ್ಲೂ ಭಾಗವಹಿಸಲಿದ್ದಾರೆ. ಅಲ್ಲಿ 10 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ 14,000 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
'विकास भी और विरासत भी' के मंत्र से आज का भारत विकास पथ पर तेज गति से अग्रसर है। उत्तर प्रदेश के संभल में श्री कल्कि धाम मंदिर के शिलान्यास कार्यक्रम का हिस्सा बनना सौभाग्य की बात है। https://t.co/dWki2lhhRX
— Narendra Modi (@narendramodi) February 19, 2024