ಶ್ರೀನಗರ: ಉಭಯ ದೇಶಗಳ ನಡುವೆ ಮಾತುಕತೆಯಾಗದ ಹೊರತು ಇಸ್ರೇಲ್ ವಿರುದ್ಧ ಯುದ್ಧದಲ್ಲಿರುವ ಗಾಜಾದಂತೆಯೇ ಕೇಂದ್ರಾಡಳಿತ ಪ್ರದೇಶಕ್ಕೂ ಭವಿಷ್ಯದಲ್ಲಿ ಆಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳ ನಾಯಕರು ತಮ್ಮ ದ್ವಿಪಕ್ಷೀಯ ಸಮಸ್ಯೆಗಳಿಗೆ ಮಾತುಕತೆಯ ಮೂಲಕವೇ ಪರಿಹಾರವನ್ನು ಕಂಡುಕೊಳ್ಳಬೇಕೆಂದು ಅವರು ಒತ್ತಾಯಿಸಿದರು. ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷರು ಎಎನ್ಐ ಜೊತೆ ಮಾತನಾಡುತ್ತಾ, ‘ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು ಆದರೆ ನಮ್ಮ ನೆರೆಹೊರೆಯವರನ್ನಲ್ಲ. ನಾವು ನಮ್ಮ ನೆರೆಹೊರೆಯವರೊಂದಿಗೆ ಸ್ನೇಹದಿಂದ ಇದ್ದರೆ, ಇಬ್ಬರೂ ಪ್ರಗತಿ ಹೊಂದುತ್ತಾರೆ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು’ ಎಂದು ಹೇಳಿದರು.
‘ಯುದ್ಧವು ಈಗ ಆಯ್ಕೆಯಾಗಿಲ್ಲ’ ಮತ್ತು ಯಾವುದೇ ‘ಸಮಸ್ಯೆಯನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬೇಕು’ ಎಂದು ಪ್ರಧಾನಿ ಮೋದಿ ಕೂಡ ಹೇಳಿದ್ದಾರೆ ಎಂದು ಫಾರೂಕ್ ಉಲ್ಲೇಖಿಸಿದ್ದಾರೆ.