News Karnataka Kannada
Saturday, May 04 2024
ದೇಶ

ಬಿಜೆಪಿ ಸೇರಿದರೆ ಇ.ಡಿಯಿಂದ ಮುಕ್ತಿ ಸಿಗುತ್ತದೆ ಎಂದ ಕೇಜ್ರಿವಾಲ್‌

ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇದುವರೆಗೆ ಎಂಟು ಬಾರಿ ಜಾರಿ ನಿರ್ದೇಶನಾಲಯದ(ಇ.ಡಿ) ಸಮನ್ಸ್‌ಗಳನ್ನು ತಪ್ಪಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಿಜೆಪಿಗೆ ಸೇರಿದರೆ ಇದೆಲ್ಲದಕ್ಕೂ ಮುಕ್ತಿ ಸಿಗುತ್ತದೆ ಎಂದಿದ್ದಾರೆ.
Photo Credit : News Kannada

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇದುವರೆಗೆ ಎಂಟು ಬಾರಿ ಜಾರಿ ನಿರ್ದೇಶನಾಲಯದ(ಇ.ಡಿ) ಸಮನ್ಸ್‌ಗಳನ್ನು ತಪ್ಪಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಿಜೆಪಿಗೆ ಸೇರಿದರೆ ಇದೆಲ್ಲದಕ್ಕೂ ಮುಕ್ತಿ ಸಿಗುತ್ತದೆ ಎಂದಿದ್ದಾರೆ.

ಟಿಎಂಸಿ ನಾಯಕ ತಪಸ್‌ ರಾಯ್‌ ಬಿಜೆಪಿ ಸೇರ್ಪಡೆ ಕುರಿತ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್‌, ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಇ.ಡಿ ಬಳಸಿ ಕಿರುಕುಳ ನೀಡುವ ಮೂಲಕ ವಿರೋಧ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರಲು ಬಲವಂತ ಮಾಡಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.

‘ನೀವು ಎಲ್ಲಿಗೆ ಹೋಗುತ್ತೀರಿ – ಬಿಜೆಪಿಗೆ ಅಥವಾ ಜೈಲಿಗೆ? ಬಿಜೆಪಿಗೆ ಸೇರಲು ನಿರಾಕರಿಸಿದವರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಎಎಪಿ ನಾಯಕರಾದ ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರು ಇವತ್ತು ಬಿಜೆಪಿ ಸೇರಿದರೆ ಸಾಕು ನಾಳೆ ಅವರಿಗೆ ಜಾಮೀನು ಸಿಗುತ್ತದೆ. ನಾನು ಬಿಜೆಪಿ ಸೇರಿದರೆ ಇ.ಡಿಯಿಂದ ನೋಟಿಸ್‌ ಬರುವುದು ನಿಲ್ಲುತ್ತದೆ’ ಎಂದು ಹೇಳಿದರು.

ಮೊದಲ ಮೂರು ಸಮನ್ಸ್‌ಗಳಿಗೆ ಪ್ರತಿಕ್ರಿಯೆ ನೀಡದೆ ಇರುವುದಕ್ಕೆ ಕೇಜ್ರಿವಾಲ್ ವಿರುದ್ಧ ಇ.ಡಿ ನ್ಯಾಯಾಲಯದ ಮೊರೆ ಹೋಗಿತ್ತು. ಈ ದೂರಿನ ವಿಚಾರಣೆ ಮಾರ್ಚ್ 16ರಂದು ನಡೆಯಲಿದೆ. ಇದೀಗ ಬುಧವಾರ ಮತ್ತೊಮ್ಮೆ ಇ.ಡಿ ನ್ಯಾಯಾಲಯದ ಮೊರೆ ಹೋಗಿದ್ದು, ವಿಚಾರಣೆಯನ್ನು ಗುರುವಾರ(ಮಾ.8) ನಡೆಸುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು