News Karnataka Kannada
Monday, April 29 2024
ದೇಶ

ಕೇಜ್ರಿವಾಲ್​ ರಾಜೀನಾಮೆ ಬಿಜೆಪಿ ಪ್ರೊಟೆಸ್ಟ್​; ಪಿಎಂ ನಿವಾಸಕ್ಕೆ ಮುತ್ತಿಗೆ ಆಪ್ ಕರೆ

Arrest
Photo Credit : NewsKarnataka

ವದೆಹಲಿ: ಈ ಹಿಂಧೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ಧೇಶಿಸಿದ್ದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಬಿಜೆಪಿ ಒತ್ತಡ ಹೇರತೊಡಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ದೆಹಲಿ ಬಿಜೆಪಿ ಘಟಕದ ನಾಯಕರು ಹಾಗೂ ಕಾರ್ಯಕರ್ತರು ಸೆಕ್ರೆಟರಿಯೇಟ್‌ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಪ್ರತಿಭಟನಾ ನಿರತರು ಪೊಲೀಸ್​ ಬ್ಯಾರಿಕೇಡ್​ಗಳನ್ನು ಭೇದಿಸಿ ಮುನ್ನುಗುತ್ತಿರುವುದನ್ನು ನೋಡಬಹುದಾಗಿದೆ. ಇ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಇತ್ತ ಬಿಜೆಪಿಗೆ ಪ್ರತಿಯಾಗಿ ಆಮ್​ ಆದ್ಮಿ ಪಕ್ಷವು ಕೇಜ್ರಿವಾಲ್​ ಬಂಧನ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂಭಾಗ ಪ್ರತಿಭಟನೆ ನಡೆಸುತ್ತಿದೆ. ಕೇಜ್ರಿವಾಲ್‌ ಅವರನ್ನು ಅಬಕಾರಿ ನೀತಿ ಹೆಸರಿನಲ್ಲಿ ಅನಗತ್ಯವಾಗಿ ಸಿಲುಕಿಸಿ ಬಂಧಿಸಲಾಗಿದೆ. ಅವರ ಪಾತ್ರವೇನೂ ಇದರಲ್ಲಿ ಇಲ್ಲ. ಇದರ ಹಿಂದೆ ರಾಜಕೀಯ ಅಡಗಿದೆ. ಲೋಕಸಭೆ ಚುನಾವಣೆಯಲ್ಲಿ ಆಪ್‌ ಪ್ರಭಾವ ತಗ್ಗಿಸಲು ಕೇಜ್ರಿವಾಲ್‌ ಬಂಧನವಾಗಿರುವ ಅನುಮಾನಗಳಿದ್ದು. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಪ್‌ ಮುಖಂಡರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು