News Karnataka Kannada
Saturday, May 04 2024
ದೇಶ

ಮೂರನೇ ಬಾರಿಯೂ ಇ.ಡಿ ವಿಚಾರಣೆಗೆ ಗೈರಾದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇ.ಡಿ ನೀಡಿರುವ ಮೂರನೇ ಸಮನ್ಸ್ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರಾಗಿದ್ದು, ನೋಟಿಸ್ ಕಾನೂನುಬಾಹಿರ ಎಂದು ಹೇಳಿರುವುದಾಗಿ ಎಎಪಿ ಮೂಲಗಳು ತಿಳಿಸಿವೆ.
Photo Credit : News Kannada

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇ.ಡಿ ನೀಡಿರುವ ಮೂರನೇ ಸಮನ್ಸ್ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರಾಗಿದ್ದು, ನೋಟಿಸ್ ಕಾನೂನುಬಾಹಿರ ಎಂದು ಹೇಳಿರುವುದಾಗಿ ಎಎಪಿ ಮೂಲಗಳು ತಿಳಿಸಿವೆ.

ತನಿಖಾ ಸಂಸ್ಥೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಲು ಕೇಜ್ರಿವಾಲ್ ಸಿದ್ಧರಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರತಿಪಾದಿಸಿದೆ. ಆದರೆ, ಅವರನ್ನು ಬಂಧಿಸಲು ಸಮನ್ಸ್ ಕಳುಹಿಸಲಾಗಿದೆ ಎಂದು ಹೇಳಿಕೊಂಡಿದೆ. ‘ಲೋಕಸಭಾ ಚುನಾವಣೆಗೂ ಮುನ್ನವೇ ನೋಟಿಸ್ ಕಳುಹಿಸಿದ್ದು ಏಕೆ? ಕೇಜ್ರಿವಾಲ್ ಅವರನ್ನು ಚುನಾವಣಾ ಪ್ರಚಾರದಿಂದ ತಡೆಯುವ ಪ್ರಯತ್ನವೇ ಈ ನೋಟೀಸ್’ ಎಂದು ಪಕ್ಷ ಆರೋಪಿಸಿದೆ.

ಅಬಕಾರಿ ನೀತಿಗೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬುಧವಾರ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದಿತ್ತು. ನವೆಂಬರ್ 2 ಮತ್ತು ಡಿಸೆಂಬರ್ 21 ರಂದು ನೀಡಿದ್ದ ಎರಡು ಸಮನ್ಸ್ಗಳನ್ನು ಧಿಕ್ಕರಿಸಿದ್ದ ಅರವಿಂದ ಅವರು ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ. ಕೇಜ್ರಿವಾಲ್ಗೆ ಇದು ಮೂರನೇ ಇ.ಡಿ ನೋಟಿಸ್ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು