ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಶುಕ್ರವಾರ ವಾಟ್ಸಾಪ್ ಮೂಲಕ ʼಕೇಜ್ರಿವಾಲ್ ಕೋ ಆಶೀರ್ವಾದ್ (ಕೇಜ್ರಿವಾಲ್ ಅವರನ್ನು ಆಶೀರ್ವದಿಸಿ)ʼ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.
ಈ ಅಭಿಯಾನ ಮೂಲಕ ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕನಿಗೆ ಆಶೀರ್ವಾದ ಮತ್ತು ಶುಭಾಶಯಗಳನ್ನು ಕಳುಹಿಸಲು ಜನರನ್ನು ಒತ್ತಾಯಿಸಲಾಗುತ್ತಿದೆ. “ನೀವು ಯಾವುದೇ ಸಂದೇಶವನ್ನು ಸಹ ಹಂಚಿಕೊಳ್ಳಬಹುದು. ಅನೇಕ ತಾಯಂದಿರು ಮತ್ತು ಹೆಣ್ಣುಮಕ್ಕಳು ತಮ್ಮ ಮಗ , ಸಹೋದರನಿಗೆ (ಕೇಜ್ರಿವಾಲ್) ಶುಭಾಶಯಗಳನ್ನು ಕಳುಹಿಸಿದ್ದಾರೆ.
ನನಗೆ ಅನೇಕ ಕರೆಗಳು ಬಂದವು ಮತ್ತು ಅನೇಕ ಜನರು ಅರವಿಂದ್ ಕೇಜ್ರಿವಾಲ್ಗಾಗಿ ಉಪವಾಸ ಮಾಡುತ್ತಿದ್ದರು. ಈ 8297324624 WhatsApp ಸಂಖ್ಯೆಗೆ ನಿಮ್ಮ ಪ್ರೀತಿಯನ್ನು ಬರೆದು ಕಳುಹಿಸಿ. ನಿಮ್ಮ ಸಂದೇಶಗಳನ್ನು ಓದುವಾಗ ಅವರಿಗೆ ಖುಷಿಯಾಗುತ್ತದೆ. ಜೈಲಿನಲ್ಲಿರುವ ಅವರಿಗೆ ಎಲ್ಲ ಸಂದೇಶಗಳನ್ನು ತಲುಪಿಸುತ್ತೇನೆ’ ಎಂದು ಸುನೀತಾ ಹೇಳಿದ್ದಾರೆ. “ಕೇಜ್ರಿವಾಲ್ ಅವರಿಗೆ ಸಂದೇಶ ಕಳುಹಿಸಲು ನೀವು ಎಎಪಿ ಕಾರ್ಯಕರ್ತರಾಗಿರಬೇಕಾಗಿಲ್ಲ. ನೀವು ಯಾವ ಪಕ್ಷದಲ್ಲಿದ್ದರೂ ಅರವಿಂದ್ ಕೇಜ್ರಿವಾಲ್ ಅವರಿಗೆ ಸಂದೇಶಗಳನ್ನು ಕಳುಹಿಸಿ ಎಂದು ಸುನೀತಾ ಮನವಿ ಮಾಡಿದ್ದಾರೆ.
#WATCH | Delhi CM Arvind Kejriwal's wife, Sunita Kejriwal issues a video statement; issues a WhatsApp number for people.
She says, "…We are starting a drive from today – Kejriwal ko aashirvaad. You can send your blessings and prayers to Kejriwal on this number…" pic.twitter.com/5Q4EgwMZez
— ANI (@ANI) March 29, 2024