ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮತ್ತೊಮ್ಮೆ ಬಿಜೆಪಿ ವಿರುದ್ಧ ಅತಿ ದೊಡ್ಡ ಆರೋಪ ಮಾಡಿದ್ದಾರೆ. ಬಿಜೆಪಿ ಪಕ್ಷ ಸೇರಿಕೊಳ್ಳುವಂತೆ ನನಗೂ ಒತ್ತಡ ಹಾಕಲಾಗಿತ್ತು. ಆದರೆ ನಾನು ಅವರ ಬೆದರಿಕೆಗಳಿಗೆಲ್ಲಾ ಬಗ್ಗಲಿಲ್ಲ ಎಂದಿದ್ದಾರೆ.
ದೆಹಲಿ ಸಿಎಂ ಕೇಜ್ರಿವಾಲ್ ಅವರು ಇತ್ತೀಚೆಗೆ ಆಮ್ ಆದ್ಮಿ ಪಕ್ಷದ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. AAP ಶಾಸಕರಿಗೆ ಕೋಟಿ, ಕೋಟಿ ರೂಪಾಯಿ ಆಮಿಷ ನೀಡೋ ಮೂಲಕ ಆಪರೇಷನ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಇದಾದ ಬಳಿಕ ತನಗೂ ಬಿಜೆಪಿ ಪಕ್ಷ ಸೇರಿಕೊಳ್ಳುವ ಒತ್ತಡ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ನಾಯಕರು ಎಂತಹ ಸಂಚು ಬೇಕಾದರೂ ಮಾಡುತ್ತಾರೆ. ಬಿಜೆಪಿಗೆ ಸೇರಿಕೊಂಡರೆ ನಮ್ಮ ಪಾಡಿಗೆ ನಾವು ಇರಲು ಅವಕಾಶ ಮಾಡಿಕೊಡುತ್ತಾರೆ. ನಾನು ನನ್ನ ನಿಲುವಿಗೆ ಬದ್ಧನಾಗಿದ್ದೇನೆ. ಎಂದಿಗೂ ಬಿಜೆಪಿ ಪಕ್ಷವನ್ನು ಸೇರಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.