ತಿರುವನಂತಪುರಂ : ಮನೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ದುರಂತದಲ್ಲಿ 8 ತಿಂಗಳ ಮಗು ಸೇರಿ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೇರಳದ ವರ್ಕಳ ಎಂಬಲ್ಲಿ ನಡೆದಿದೆ. ಇಲ್ಲಿನ ದಲವಾಪುರಂ ಎಂಬಲ್ಲಿ ಮನೆಯಲ್ಲಿ ಮಧ್ಯರಾತ್ರಿ 1:45ರ ಸುಮಾರಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ದುರಂತದಲ್ಲಿ ಒಂದೇ ಮನೆಯ ಐವರು ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರತಾಪನ್ (62), ಶೆರ್ಲಿ (53) ಅಭಿರಾಮಿ (25) ಅಖಿಲ್ (29) ಮತ್ತು 8 ತಿಂಗಳ ಮಗು ರಿಯಾನ್ ಎಂದು ಗುರುತಿಸಲಾಗಿದೆ. ಪ್ರತಾಪ್ ಮಗ ನಿಹುಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರತಾಪ್ ವರ್ಕಳದಲ್ಲಿ ತರಕಾರಿ ವ್ಯಾಪಾರ ನಡೆಸುತ್ತಿದ್ದರು. ಬೆಂಕಿ ದುರಂತದಲ್ಲಿ ಮನೆಯಲ್ಲಿ ನಿಲ್ಲಿಸಿದ್ದ 5 ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.