News Karnataka Kannada
Monday, May 06 2024
ಕೇರಳ

ಇಂದಿನಿಂದ ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್

Ramnath Kovind
Photo Credit :

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಇಂದಿನಿಂದ ನಾಲ್ಕು ದಿನಗಳ ಕಾಲ ಕೇರಳ ಪ್ರವಾಸ ಕೈಗೊಳ್ಳಲಿದ್ದು, ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಮೊದಲನೇ ದಿನವಾದ ಇಂದು ರಾಷ್ಟ್ರಪತಿ ಕೋವಿಂದ್‌ ಅವರು ಕಾರಸರಗೋಡಿನಲ್ಲಿನ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ನಾಳೆ 22ರಂದು ದಕ್ಷಿಣ ನೌಕಾ ಕಮಾಂಡ್‌ ನ ಕಾರ್ಯಾಚರಣೆಯ ಪ್ರದರ್ಶನವನ್ನು ವೀಕ್ಷಿಸಲು ಕೊಚ್ಚಿಗೆ ತೆರಳಲಿದ್ದಾರೆ. ನಂತರ ನೌಕಾ ನೆಲದಲ್ಲಿ ಇರುವ ವಿಕ್ರಾಂತ್‌ ಸೆಲ್‌ ಗೆ ಕೂಡ ಭೇಟಿ ನೀಡಲಿದ್ದಾರೆ.

ಮೂರನೇ ದಿನ ರಾಷ್ಟ್ರಪತಿ ಕೋವಿಂದ್‌ ಅವರು ರಾಜ್ಯ ರಾಜಧಾನಿ ತಿರುವನಂತಪುರದಲ್ಲಿ ಪಿ.ಎನ್.‌ ಪಣಿಕರ್‌ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿ.24ಕ್ಕೆ ರಾಷ್ಟ್ರಪತಿಗಳು ದೆಹಲಿಗೆ ಹಿಂತಿರುಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು