News Karnataka Kannada
Friday, May 03 2024
ಕೇರಳ

ಇಡುಕ್ಕಿಯಲ್ಲಿ ಹತ್ಯೆಯಾದ ಎಸ್‌ಎಫ್‌ಐ ಕಾರ್ಯಕರ್ತನ ಮನೆಗೆ ಭೇಟಿ ನೀಡಿದ ಕೇರಳ ಸಿಎಂ

Pinarayi Vijayan
Photo Credit :

ಕಣ್ಣೂರು : ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಜನವರಿಯಲ್ಲಿ ಇಡುಕ್ಕಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಹತ್ಯೆಗೀಡಾದ ಎಸ್‌ಎಫ್‌ಐ (ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ) ಕಾರ್ಯಕರ್ತನ ಮನೆಗೆ ಭಾನುವಾರ ಭೇಟಿ ನೀಡಿದರು.

ಈ ಬಗ್ಗೆ ಫೇಸ್‌ಬುಕ್ ಪೋಸ್ಟ್‌ ಮಾಡಿರುವ ಸಿಎಂ, ತಮ್ಮ ಮಗನ ಸಾವಿನ ಬಗ್ಗೆ ಇನ್ನೂ ಸಹಜ ಸ್ಥಿತಿಗೆ ಬರದಿರುವ ಪೋಷಕರನ್ನು ಭೇಟಿ ಮಾಡಿದ್ದೇನೆ ಮತ್ತು ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಬೆಂಬಲವನ್ನುನೀಡುವುದಾಗಿ ಅವರಿಗೆ ಭರವಸೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಜನವರಿ 10 ರಂದು ಮಧ್ಯಾಹ್ನ ಕಣ್ಣೂರು ನಿವಾಸಿ ಧೀರಜ್ ರಾಜೇಂದ್ರನ್ (21), ಮತ್ತು ಇತರ ಇಬ್ಬರಾದ ಅಭ್ಜಿತ್ ಮತ್ತು ಅಮಲ್ ಮೇಲೆ ದಾಳಿ ನಡೆಸಲಾಗಿತ್ತು.

ಯುವ ಕಾಂಗ್ರೆಸ್ ಜಿಲ್ಲಾ ಮುಖಂಡ ನಿಖಿಲ್ ಪೈಲಿ ಎಂಬಾತ ಹೊರಗಿನ ತಂಡದೊಂದಿಗೆ ಕಾಲೇಜಿಗೆ ಆಗಮಿಸಿ ಧೀರಜ್ ಮತ್ತು ಇತರರನ್ನು ಇರಿದು ಕ್ಯಾಂಪಸ್‌ನಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು