ತಿರುವನಂತಪುರ: ಕೇರಳ ರಾಜ್ಯದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಸಚಿವಾಲಯ ಸೂಚಿಸಿದೆ.
ಭಾನುವಾರ ಮತ್ತೆ 19 ಮಂದಿಯಲ್ಲಿ ಓಮೈಕ್ರಾನ್ ಪ್ರಕರಣ ದೃಢಪಟ್ಟಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿಯಿಂದ ಸೋಂಕಿತರಾದವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಸಚಿವಾಲಯ ತಿಳಿಸಿದೆ.
ಹೊಸ ಪ್ರಕರಣಗಳ ಪೈಕಿ 11 ಎರ್ನಾಕುಳಂ, 6 ತಿರುವನಂತಪುರ, ತ್ರಿಶೂರ್ ಹಾಗೂ ಕಣ್ಣೂರಿನಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.