ಕಾಸರಗೋಡು : ಕೇರಳದಲ್ಲಿ ಕೊರೋನ ಪ್ರಕರಣಗಳು ಇಳಿಕೆಯಾಗಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಕಂಡು ಬಂದಿರುವ ಒಮೆಕ್ರೋನ್ ಸೋಂಕು ಹಿನ್ನಲೆಯಲ್ಲಿ ಕೇರಳದಿಂದ ಕರ್ನಾಟಕಕ್ಕೆ ತೆರಳುವವರಿಗೆ ನಿರ್ಬಂಧ ವಿಧಿಸಿರುವ ಕರ್ನಾಟಕ ಸರಕಾರದ ತೀರ್ಮಾನ ಬಗ್ಗೆ ಮಧ್ಯಪ್ರವೇಶಿಸುವಂತೆ ಮಂಜೇಶ್ವರ ಶಾಸಕ ಎ .ಕೆ . ಎಂ ಆಶ್ರಫ್ ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಿಗೆ ಮನವಿ ಸಲ್ಲಿಸಿದ್ದಾರೆ.
ಕಾಸರಗೋಡು ಜಿಲ್ಲೆ ಅದರಲ್ಲೂ ಮಂಜೇಶ್ವರ ವ್ಯಾಪ್ತಿಯ ಸಾವಿರಾರು ಮಂದಿ ಶೈಕ್ಷಣಿಕ , ಉದ್ಯೋಗ , ಆಸ್ಪತ್ರೆ ಹಾಗೂ ಇನ್ನಿತರ ಅಗತ್ಯಗ ಳಿ ಗಾಗಿ ಮಂಗಳೂರನ್ನು ಅವಲಂಬಿಸಿಕೊಂಡಿದ್ದಾರೆ. ಆದರೆ ಸೋಂಕು ಇಳಿಕೆಯಾಗಿದ್ದರೂ ತಲಪಾಡಿ ಸೇರಿದಂತೆ ಕೇರಳ – ಕರ್ನಾಟಕ ಗಡಿಯಲ್ಲಿ ಸಂಚಾರಕ್ಕೆ ಮತ್ತೆ ನಿರ್ಬಂಧ ಹೇರಲಾಗಿದ್ದು , ಆರ್ ಟಿ ಪಿ ಸಿ ಆರ್ ನೆಗಟಿವ್ ಸರ್ಟಿಫಿಕೇಟ್ ಕಡ್ಡಾಯ ಗೊಳಿಸಲಾಗಿದೆ.
ಇದರಿಂದ ದೈನಂದಿನ ಮಂಗಳೂರಿಗೆ ತೆರಳುವವರು ಸಮಸ್ಯೆಗೆ ಸಿಲುಕಿದ್ದಾರೆ. ಎರಡು ಡೋಸ್ ವ್ಯಾಕ್ಸಿನ್ ಪಡೆದವ ರಿಗೂ ಅನುಮತಿ ನೀಡುತ್ತಿಲ್ಲ . ಕರ್ನಾಟಕ ಸರಕಾರ ಈ ತೀರ್ಮಾನ ದಿಂದ ಉಂಟಾಗಿರುವ ಸಮಸ್ಯೆ ಬಗ್ಗೆ ಮಧ್ಯಪ್ರವೇಶಿಸುವಂತೆ ಶಾಸಕರು ಒತ್ತಾಯಿಸಿದ್ದಾರೆ