ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇನ್ನು ಇನ್ನೂ ಅವಶೇಷಗಳಡಿ ಸಿಲುಕಿ 13ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.
ಮಳೆ ಹೆಚ್ಚಾಗಿರುವುದರಿಂದ ಹಲವೆಡೆ ಪ್ರವಾಹದ ಆತಂಕ ಎದುರಾಗಿದ್ದು, ಮನೆಗಳು ಕೊಚ್ಚಿ ಹೋಗಿವೆ. ಮಳೆಯಿಂದ ಕೊಟ್ಟಾಯಂನ ಕೂಟ್ಟಿಕಲ್ ಗ್ರಾಮದಲ್ಲಿ 3 ಮನೆಗಳು ಹಾಗೂ ಅಂಗಡಿಗಳು ಕೊಚ್ಚಿ ಹೋಗಿವೆ.
ಕೇರಳದಲ್ಲಿ ಬೇರೆ ಜಿಲ್ಲೆಗಳಿಗಿಂತಲೂ ಕೊಟ್ಟಾಯಂ ಮತ್ತು ಪಥನಾಂತಿಟ್ಟ ಹೆಚ್ಚು ಹಾನಿಗೊಳಗಾಗಿವೆ. ಮಳೆಯಿಂದ ರಸ್ತೆಗಳೆಲ್ಲ ನದಿಯಂತಾಗಿದ್ದು, ಕೆಎಸ್ಆರ್ಟಿಸಿ ಬಸ್ ಮಳೆ ನೀರಿನಲ್ಲಿ ಅರ್ಧ ಮುಳುಗಿರುವ ವಿಡಿಯೋಗಳು ವೈರಲ್ ಆಗಿವೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನಾಳೆಯವರೆಗೂ ಕೇರಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು ಆಯಾ ಜಿಲ್ಲೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
#heavyrainkerala Torrential rain and landslide in south Kerala. Visuals from Kottayam district. pic.twitter.com/vj7vUJTQ4O
— Umarul Farooque (@Ufarooque) October 16, 2021