ಕೇರಳ: ವಿಷಪೂರಿತ ಆಹಾರ ಸೇವನೆಯಿಂದ ಶಾಲಾ ಮಕ್ಕಳು ಅಸ್ವಸ್ಥರಾದ ಮತ್ತೊಂದು ಘಟನೆ ಕೇರಳದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
ಹಿಂದು-ಕ್ರಿಶ್ಚಿಯನ್ ವಿರೋಧಿ ಘೋಷಣೆ ಕೂಗಿದ್ದ ಪಿಎಫ್ಯ ರ್ಯಾಲಿಗೆ ಸಾಕ್ಷಿಯಾಗಿದ್ದ ಅಲಪ್ಪುಳದ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ ಶಾಲೆಯ ಬಿಸಿಯೂಟ ಸೇವಿಸಿದ 18 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಆಹಾರ ಮತ್ತು ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಆಹಾರ ಸುರಕ್ಷತಾ ಆಯುಕ್ತರು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶ ನೀಡಿದ್ದಾರೆ.