ತಿರುವನಂತಪುರಂ : ಇಂದು ತಿರುವನಂತಪುರಂನಿಂದ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಾಪಸ್ ಆಗಿದೆ.
ವಿಮಾನದಲ್ಲಿ ಆರು ಸಿಬ್ಬಂದಿ ಸೇರಿದಂತೆ 170 ಪ್ರಯಾಣಿಕರಿದ್ದರು. ಟೇಕ್ ಆಫ್ ಆದ ಅರ್ಧ ಗಂಟೆಯಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿದ್ದು, ಅದನ್ನು ಪೈಲಟ್ಗಳು ಗುರುತಿಸಿದರು ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್(ಎಐಇ) ವಕ್ತಾರರು ಮಾಹಿತಿ ನೀಡಿದ್ದಾರೆ.
ವಿಮಾನ ವನ್ನು ಸರಕ್ಷಿತವಾಗಿ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಯಿತು. ನಂತರ ಪ್ರಯಾಣಿಕರಿಗೆ ಬೇರೆ ವಿಮಾನ ವ್ಯವಸ್ಥೆ ಮಾಡಿ ಕಳುಹಿಸಲಾಯಿತು ಎಂದು ಎಐಇ ಹೇಳಿದ್ದಾರೆ.