ತಿರುವನಂತಪುರ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ಕ್ಯಾನ್ಸರ್ ತಜ್ಞ ಡಾ.ಎಂ.ಕೃಷ್ಣನ್ ನಾಯರ್ (81) ಗುರುವಾರ ತಮ್ಮ ನಿವಾಸದಲ್ಲಿ ನಿಧನರಾದರು.
ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ನೀಡುವಲ್ಲಿ ಹಲವಾರು ಹೊಸ ಹಾದಿಗಳನ್ನು ಕಂಡುಕೊಂಡಿದ್ದ ಕೃಷ್ಣನ್ ಅವರು, ಬಡವರಿಗೂ ಅಗ್ಗದ ದರದಲ್ಲಿ ಕ್ಯಾನ್ಸರ್ ಚಿಕಿತ್ಸೆ ಮಾಡಿಸಿಕೊಳ್ಳುವಂತಹ ವ್ಯವಸ್ಥೆ ಕಲ್ಪಿಸಿದ್ದರು. ಇಲ್ಲಿನ ಖ್ಯಾತ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರದ ಸಂಸ್ಥಾಪಕ ನಿರ್ದೇಶಕರಾಗಿದ್ದ ಅವರು, ವಿಶ್ವ ಆರೋಗ್ಯ ಸಂಘಟನೆಯ ಪರಿಣಿತರ ಸಲಹಾ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.