News Karnataka Kannada
Friday, May 03 2024
ಕೇರಳ

ವಿಸ್ಮಯಾ ಸಾವು ಪ್ರಕರಣ: ಗಂಡನಿಗೆ 10 ವರ್ಷ ಜೈಲು ಶಿಕ್ಷೆ

Untitled 1
Photo Credit :

ತಿರುವನಂತಪುರಂ: ವರದಕ್ಷಿಣೆ ಮತ್ತು ಕೌಟುಂಬಿಕ ಕಿರುಕುಳದಿಂದ ವಿಸ್ಮಯಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆಕೆಯ ಗಂಡ ಎಸ್. ಕಿರಣ್ ಕುಮಾರ್‌ಗೆ 10 ವರ್ಷ ಜೈಲು ಶಿಕ್ಷೆ ಮತ್ತು 12.55 ಲಕ್ಷ ರೂ. ದಂಡ ವಿಧಿಸಲಾಗಿದೆ.

ವಿಸ್ಮಯಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದಕ್ಕಾಗಿ 6 ವರ್ಷಗಳ ಜೈಲು ಮತ್ತು 2 ಲಕ್ಷ ರೂ.ದಂಡ ಮತ್ತು ಕ್ರಿಮಿನಲ್ ಬೆದರಿಕೆಯ ಅಪರಾಧದ ಅಡಿಯಲ್ಲಿ ಎರಡು ವರ್ಷಗಳ ಜೈಲು ಮತ್ತು 50,000 ರೂ. ದಂಡ, ವರದಕ್ಷಿಣೆ ನಿಷೇಧ ಕಾಯ್ದೆಯಡಿ 6 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ದಂಡ, ವರದಕ್ಷಿಣೆ ಬೇಡಿಕೆಯ ಅಪರಾಧದಡಿ ಒಂದು ವರ್ಷ ಜೈಲು ಹಾಗೂ 5 ಸಾವಿರ ದಂಡ ವಿಧಿಸಲಾಗಿದೆ.

ಈ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಾಗುತ್ತವೆ. ಅಂದರೆ ಕಿರಣ್ ಒಟ್ಟು 25 ವರ್ಷಗಳ ಜೈಲುವಾಸಕ್ಕೆ ಕಳುಹಿಸಲ್ಪಟ್ಟಿದ್ದರೂ ಅವನು 10 ವರ್ಷ ಜೈಲಿನಲ್ಲಿ ಕಳೆಯುತ್ತಾನೆ. ದಂಡದ ಮೊತ್ತ ರೂ. 12.55 ಲಕ್ಷ ವಿಸ್ಮಯಾ ಪೋಷಕರಿಗೆ ಪರಿಹಾರವಾಗಿ ಪಾವತಿಸಲಾಗುವುದು ಎಂದು ಹೇಳಲಾಗಿದೆ.

ಕಳೆದ ವರ್ಷ ಜೂನ್‌ನಲ್ಲಿ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ, ಕಿರಣ್‌ ಪತ್ನಿ ವಿಸ್ಮಯಾಳ ಸಾವಿಗೆ ವರದಕ್ಷಿಣೆ ಸಾವು ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೊಲ್ಲಂ ನ್ಯಾಯಾಲಯವು ಮೇ 23ರಂದು ಕಿರಣ್‌ ಅಪರಾಧಿ ಎಂದು ತೀರ್ಪು ನೀಡಿತ್ತು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಜಿತ್ ಕೆ. ಎನ್. ಕಿರಣ್ ಕುಮಾರ್ ಐಪಿಸಿ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ವರದಕ್ಷಿಣೆ ಸಂಬಂಧಿತ ಕಿರುಕುಳದ ಅಪರಾಧಕ್ಕಾಗಿ ಶಿಕ್ಷೆ ವಿಧಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು