ಕೇರಳದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಶಬರಿಮಲೆ ದೇವಸ್ಥಾನದ ಮೇಲಿನ ಭಕ್ತರ ಪ್ರವೇಶ ನಿರ್ಬಂಧಗಳನ್ನು ಸಡಿಲಿಸಿದೆ.
ಮಂಡಲ-ಮಕರವಿಳಕ್ಕು (ಮಕರ ಸಂಕ್ರಾಂತಿ) ಉತ್ಸವದ ವೇಳೆ ಭಕ್ತರಿಗೆ ತುಪ್ಪದ ಅಭಿಷೇಕಕ್ಕೆ ಅವಕಾಶ ಕಲ್ಪಿಸಿದೆ. ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಸಡಿಲಿಕೆ ಅನ್ವಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಪ್ರತಿನಿತ್ಯ 60 ಸಾವಿರ ಭಕ್ತರಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶ ನೀಡಿದೆ. ಈ ವೇಳೆ ಕೋವಿಡ್ ನಿಯಮ ಅನುಸರಿಸಿ ಕಾಡಿನ ಮಾರ್ಗದ ಮೂಲಕವೂ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.