ತಿರುವನಂತಪುರಂ:ಪ್ರಸಿದ್ಧ ಶಬರಿಮಲೆ ದೇವಸ್ಥಾನವನ್ನು ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿ ಭಾನುವಾರ ಬೆಟ್ಟದ ಮೇಲಿನ ದೇಗುಲಕ್ಕೆ ಯಾತ್ರಿಕರ ದೈನಂದಿನ ಮಿತಿಯನ್ನು 60,000 ಕ್ಕೆ ಹೆಚ್ಚಿಸಿದೆ ಎಂದು ಹೇಳಿದೆ.ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ‘ನೆಯ್ಯಭಿಷೇಕ’ (ತುಪ್ಪದ ಅಭಿಷೇಕ) ಮಾಡಲು ಭಕ್ತರಿಗೆ ಅನುಮತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ದೇಗುಲಕ್ಕೆ ಸಾಂಪ್ರದಾಯಿಕ ಮಾರ್ಗದ ಮೂಲಕ ಯಾತ್ರಾರ್ಥಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ದೇವಸ್ವಂ ಸಚಿವರ ಕಚೇರಿ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗುತ್ತಿರುವುದನ್ನು ಪರಿಗಣಿಸಿ ದೇವಾಲಯದ ಮೇಲಿನ ನಿರ್ಬಂಧಗಳನ್ನು ಸಡಿಲಿಸಲು ಅನುಮತಿಸಲಾಗಿದೆ.