ಕಾಸರಗೋಡು: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪ್ರಸಾದ ಮತ್ತು ಅನ್ನದಾನಕ್ಕೆ ಬೇಕಾಗುವ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗುವ ಟ್ರ್ಯಾಕ್ಟರ್ಗಳ ಸಂಚಾರಕ್ಕೆ ಸಮಯ ಮಿತಿ ನಿಗದಿ ಮಾಡಿ ಕೇರಳ ಹೈಕೋರ್ಟ್ ಗುರುವಾರ ಆದೇಶ ಹೊರಡಿಸಿದೆ. ಸೋಮವಾರ ದಿಂದ ಗುರುವಾರದ ವರೆಗೆ ಬೆಳಗ್ಗೆ 10.30ರಿಂದ ಸಂಜೆ 4ರ ವರೆಗೆ, ರಾತ್ರಿ 10ರಿಂದ ಬೆಳಗ್ಗೆ 3ರ ವರೆಗೆ ಈ ಟ್ರ್ಯಾಕ್ಟರ್ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಆದರೆ ಅವು ಭಕ್ತರು ನಡೆದುಕೊಂಡು ಹೋಗುವ ದಾರಿಯಲ್ಲಿ ನಿಧಾನವಾಗಿ ಸಂಚರಿಸುವಂತೆ ಮಾಡಬೇಕು.
ಈ ಬಗ್ಗೆ ಪೊಲೀಸರು ಮುತುವರ್ಜಿ ವಹಿಸ ಬೇಕು ಎಂದು ಸೂಚಿಸಿದೆ. ಜತೆಗೆ ದೈನಿಕ ಪೂಜಾವಿಧಿಗಳಿಗಾಗಿ ಪೂಜಾ ಸಾಮಗ್ರಿಗಳನ್ನು ಪ್ರತೀ ದಿನ ಬೆಳಗ್ಗೆ 5ರಿಂದ 7ರ ವರೆಗೆ ಒಯ್ಯಲು ಹೈಕೋರ್ಟ್ ಅನುಮತಿ ಕೊಟ್ಟಿದೆ.
ಈ ಹಿಂದೆ ಡಿ. 10ರಂದು ಆದೇಶ ನೀಡಿದ್ದ ಹೈಕೋರ್ಟ್, ತಿರುವಾಂಕೂರು ದೇವಸ್ವಂ ಮಂಡಳಿಯದ್ದಲ್ಲದ ಸರಕು ಸಾಗಣೆ ಟ್ರ್ಯಾಕ್ಟರ್ಗಳು ಪಂಬಾದಿಂದ ಸನ್ನಿಧಾನಕ್ಕೆ ಮಧ್ಯರಾತ್ರಿ 12ರಿಂದ ರಾತ್ರಿ 3ರ ವರೆಗೆ ಮಾತ್ರ ಸಂಚರಿಸಬೇಕು ಎಂಬ ತನ್ನ 2017 ನವೆಂಬರ್ನ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿತ್ತು. ಇದನ್ನು ಸಡಿಲಿಸಬೇಕು ಎಂದು ದೇವಸ್ವಂ ಮಂಡಳಿ ಮತ್ತು ಜಾಗೃತ ಅಧಿಕಾರಿ ಅರ್ಜಿ ಸಲ್ಲಿಸಿದ್ದರು.
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…
ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲಾ ಪೊಲೀಸರು…
2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…
ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್ ಕಂಡಿಷನರ್ (ಎಸಿ), ಏರ್ ಕೂಲರ್ಗಳ…
ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…