ತಿರುವನಂತಪುರಂ:ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರವು ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಸ್ಥಿರವಾಗಿ ಇಳಿಮುಖವಾಗುತ್ತಿರುವುದರಿಂದ ಶಬರಿಮಲೆ ಯಾತ್ರೆಗೆ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸುವುದಾಗಿ ಶುಕ್ರವಾರ ಘೋಷಿಸಿದೆ ಕಟ್ಟುನಿಟ್ಟಾದ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು ಎಂದು ಭರವಸೆ ನೀಡಲಾಗಿದೆ.
ಸಿಎಂ ವಿಜಯನ್ ಹಾಗೂ ದೇವಸ್ವಂ ಸಚಿವ ಕೆ.ರಾಧಾಕೃಷ್ಣನ್ ನಡುವೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ, ಸನ್ನಿಧಾನನಲ್ಲಿ ಭಕ್ತಾದಿಗಳಿಗೆ ರಾತ್ರಿ ತಂಗಲು ಅನುಮತಿಸಲಾಗುವುದು ಮತ್ತು 500 ಕೊಠಡಿಗಳನ್ನು ಸ್ಥಾಪಿಸಲಾಗಿದೆ.
ಅಲ್ಲದೆ, ಪಂಬಾದಿಂದ ನೀಲಿಮಲ, ಅಪ್ಪಾಚಿಮೇಡು ಮತ್ತು ಮರಕೂಟಂಗೆ ಸಾಂಪ್ರದಾಯಿಕ ಮಾರ್ಗವನ್ನು ತೆರೆಯಲಾಗುವುದು. ಇದಲ್ಲದೇ ನೀಲಿಮಲ ಮತ್ತು ಅಪ್ಪಾಚಿಮೇಡುವಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು.ಇದಲ್ಲದೆ, ಭಕ್ತರು ಪಂಪಾ ನದಿಯಲ್ಲಿ ಸ್ನಾನ ಮಾಡಿ ‘ಬಲಿ’ಯನ್ನು ಅರ್ಪಿಸಬಹುದು.ಆದರೆ, ಪಂಪಾದಲ್ಲಿ ನೀರಿನ ಮಟ್ಟವನ್ನು ಮೌಲ್ಯಮಾಪನ ಮಾಡಿದ ನಂತರ ಜಿಲ್ಲಾಡಳಿತವು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ.