ಕಾಸರಗೋಡು: ಕೇರಳದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಹಿನ್ನೆಲೆಯಲ್ಲಿ ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಖಾತೆ ಸಚಿವೆ ವೀಣಾ ಜೋರ್ಜ್ ತಿರುವನಂತಪುರದಲ್ಲಿ ತಿಳಿಸಿದ್ದಾರೆ.
ಎಲ್ಲ ಮಕ್ಕಳಿಗೆ ಲಸಿಕೆ ಹಾಕಲು ಕೇರಳ ಸರಕಾರವು ಸಿದ್ಧವಿದೆ. ಕೇಂದ್ರ ಸರಕಾರವು ಮಾರ್ಗದರ್ಶನ ನೀಡಿದರೆ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಪ್ರತೀ ವಿದ್ಯಾರ್ಥಿಯು ಶಾಲೆಗೆ ಹೋಗಿ ವಾಪಸ್ ಮನೆಗೆ ಬರುವವರೆಗೂ ಪರಿಸ್ಥಿತಿಯನ್ನು ಗಮನಿಸುವಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಈ ಹಿಂದೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶಿಕ್ಷಣ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಎಲ್ಲ ಸ್ಟೇಷನ್ ಹೌಸ್ ಆಫೀಸರ್ಗಳು ಮಕ್ಕಳ ಸುರಕ್ಷತೆ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ತಮ್ಮ ಪ್ರದೇಶದ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಶಾಲಾ ನಿರ್ವಹಣಾ ಪ್ರತಿನಿಧಿಗಳ ಸಭೆ ನಡೆಸಲಿದ್ದಾರೆ.
ಮಕ್ಕಳನ್ನು ಕರೆದೊಯ್ಯುವ ಶಾಲಾ ವಾಹನಗಳ ಕಾರ್ಯಕ್ಷಮತೆಯನ್ನು ಖಾತರಿಪಡಿಸುವ ಜವಾಬ್ದಾರಿಯನ್ನು ಕೂಡ ಪೊಲೀಸರು ಹೊಂದಿರುತ್ತಾರೆ ಎಂದು ಸಚಿವೆ ವೀಣಾ ಜೋರ್ಜ್ ನುಡಿದರು. ಶಾಲೆಗೆ ಭೇಟಿ ನೀಡಿ ಮತ್ತು ಮಕ್ಕಳ ಸುರಕ್ಷಿತ ವಿಷಯಗಳು ಕಾರ್ಯಗತವಾಗುತ್ತಿವೆಯೇ ಎಂದು ಪರೀಕ್ಷಿಸಲು ಠಾಣೆಯ ಗೃಹ ಅಧಿಕಾರಿಗಳಿಗೆ ಸಚಿವೆ ಸೂಚಿಸಿದರು.