News Karnataka Kannada
Monday, April 29 2024
ಕೇರಳ

ಶಾಲೆಯಲ್ಲಿ ಕಲ್ಲಂಗಡಿ ಹಣ್ಣು ಕತ್ತರಿಸಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷಕರಿಂದ ಥಳಿತ

Beating
Photo Credit :

ಪಾಲಕ್ಕಾಡ್‌ :  ಶಿಕ್ಷಕರ ಗುಂಪೊಂದು 10 ನೇ ತರಗತಿ ವಿದ್ಯಾರ್ಥಿಗೆ ಶಾಲಾ ಆವರಣದಲ್ಲಿ ಹುಟ್ಟುಹಬ್ಬದ ಆಚರಣೆ ಮತ್ತು ಕಲ್ಲಂಗಡಿ ಹಣ್ಣನ್ನು ಕತ್ತರಿಸಿದ್ದಕ್ಕಾಗಿ ಥಳಿಸಿದೆ ಎಂದು ಆರೋಪಿಸಲಾಗಿದೆ.

ಕೇರಳದ ಪಾಲಕ್ಕಾಡ್‌ ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ.ಗಾಯಗೊಂಡಿರುವ ವಿದ್ಯಾರ್ಥಿಯನ್ನು ಶ್ರೇಯಸ್ ಎಂದು ಗುರುತಿಸಲಾಗಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವರದಿಗಳ ಪ್ರಕಾರ, ಶ್ರೇಯಸ್ ಶಾಲೆಯಲ್ಲಿ ತನ್ನ ಸ್ನೇಹಿತನೊಬ್ಬನಿಗೆ ಹುಟ್ಟುಹಬ್ಬದ ಆಚರಣೆ ಆಯೋಜಿಸಿದ್ದ. ಕೇಕ್ ಬದಲು ಕಲ್ಲಂಗಡಿ ಹಣ್ಣನ್ನು ಕತ್ತರಿಸುವ ಯೋಜನೆ ಹಾಕಿಕೊಂಡಿದ್ದರು. ಈ ಹುಟ್ಟುಹಬ್ಬದ ಸಂಭ್ರಮಾಚರಣೆಯಿಂದ ಅಸಮಾಧಾನಗೊಂಡ ಶಿಕ್ಷಕರು, ಶ್ರೇಯಸ್ ಅವರನ್ನು ಸಿಬ್ಬಂದಿ ಕೊಠಡಿಗೆ ಕರೆದರು. ಆಗ ಶಿಕ್ಷಕರ ಗುಂಪೊಂದು ಆತನನ್ನು ಥಳಿಸಿದೆ ಎನ್ನಲಾಗಿದೆ.

ಆದರೆ, ಶಾಲೆಯ ಅಧಿಕಾರಿಗಳು ಆರೋಪವನ್ನು ತಳ್ಳಿ ಹಾಕಿದ್ದಾರೆ. ಶಾಲೆಯ ಘನತೆಗೆ ಮಸಿ ಬಳಿಯಲು ಹೊರಗಿನವರು ಮಾಡುತ್ತಿರುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದ್ದಾರೆ. ಶಿಕ್ಷಕರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು