News Karnataka Kannada
Monday, May 06 2024
ಕೇರಳ

ಹಿಜಾಬ್ ಇಸ್ಲಾಂನ ಆಚರಣೆಯಲ್ಲಿ ಅಂತರ್ಗತವಾಗಿಲ್ಲ: ಕೇರಳ ಗವರ್ನರ್ ಮಹಮದ್ ಖಾನ್

Kerala Governor Mohammad Khan
Photo Credit : Twitter

ತಿರುವನಂತಪುರ: ಕರ್ನಾಟಕದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕುರಿತು ತೀವ್ರ ವಿವಾದದ ಹಿನ್ನೆಲೆಯಲ್ಲಿ ಮಾತನಾಡಿರುವ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಹಿಜಾಬ್ ಇಸ್ಲಾಂನ ಆಚರಣೆಯಲ್ಲಿ ಅಂತರ್ಗತವಾಗಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಆರಂಭಗೊಂಡು ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ಗವರ್ನರ್ ಮಹಮದ್ ಖಾನ್ ಹೇಳಿಕೆ ನೀಡಿದ್ದು, ಮುಸ್ಲಿಂ ಸಮುದಾಯದಲ್ಲಿ ಹಿಜಾಬ್ ಅನಿವಾರ್ಯವಲ್ಲ ಎಂದು ಹೇಳಿದ್ದಾರೆ.

ಸಿಖ್ಖರಿಗೆ ಟರ್ಬನ್ ರೀತಿಯಲ್ಲಿ ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ಅನಿವಾರ್ಯವಲ್ಲ. ಕೆಲವು ಕಾಲೇಜುಗಳು ಮತ್ತು ಶಾಲೆಗಳಲ್ಲಿ ಸಿಖ್ಖರಿಗೆ ಟರ್ಬನ್ ಧರಿಸಲು ಅವಕಾಶವಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದನ್ನು ನಿಷೇಧಿಸಿದೆ ಎಂಬ ವಾದವು ಅಸಂಬದ್ಧ ಎಂದು ಹೇಳಿದರು.

‘ಸಿಖ್ ಧರ್ಮದಲ್ಲಿ, ಪೇಟವನ್ನು ಧರ್ಮಕ್ಕೆ ಅತ್ಯಗತ್ಯವೆಂದು ಪರಿಗಣಿಸಲಾಗಿದೆ ಮತ್ತು ಸ್ವೀಕರಿಸಲಾಗಿದೆ. ಮತ್ತೊಂದೆಡೆ ಹಿಜಾಬ್ ಕುರಿತಾಗಿ ಕುರಾನ್‌ನಲ್ಲಿ ಯಾವುದೇ ಉಲ್ಲೇಖವನ್ನು ಕಾಣುವುದಿಲ್ಲ. ಕೆಲವು ಪಟ್ಟಭದ್ರಾ ಹಿತಾಸಕ್ತಿಗಳು ಯುವ ಮುಸ್ಲಿಂ ಮಹಿಳೆಯರನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ಮುಸ್ಲಿಂ ಮಹಿಳೆಯರನ್ನು ಅಂಧಕಾರ ಯುಗಕ್ಕೆ ತಳ್ಳಲು ಬಯಸುತ್ತವೆ. ಹೊರಗಿನವರ ಪ್ರಚೋದನೆಗೆ ಒಳಗಾಗಬೇಡಿ, ಓದಿನ ಕಡೆ ಗಮನ ಹರಿಸಿ ಎಂದು ಮಹಮದ್ ಖಾನ್ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು