News Karnataka Kannada
Monday, May 13 2024
ಕೇರಳ

37 ಭಾರತೀಯ ಮೀನುಗಾರರ ಬಂಧನ: ಬೋಟ್​ಗಳು ವಶಕ್ಕೆ

Fishrng Arrest
Photo Credit : News Kannada

ಶ್ರೀಲಂಕಾ: ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 37 ಭಾರತೀಯ ಮೀನುಗಾರರನ್ನು ಬಂಧಿಸಿದ್ದು, ಅವರ ಐದು ದೋಣಿಗಳನ್ನು ಇದೀಗ ಶ್ರೀಲಂಕಾ ನೌಕಾಪಡೆಯು ಇಂದು (ಅ.29) ವಶಪಡಿಸಿಕೊಂಡಿದೆ. ಈ ವಿಷಯದ ಗೌಪ್ಯ ಮೂಲಗಳ ಪ್ರಕಾರ, ಶ್ರೀಲಂಕಾದ ಕಡಲಿನಲ್ಲಿ ಚೀನಾದ ನೌಕಾಪಡೆಯ ಬೇಹುಗಾರಿಕಾ ಹಡಗು ಲಂಗರು ಹಾಕಿದ ಬೆನ್ನಲ್ಲೇ ನೌಕಾಪಡೆಯು ಗಸ್ತು ಚಟುವಟಿಕೆಗಳನ್ನು ಮತ್ತಷ್ಟು ತೀವ್ರಗೊಳಿಸಿದೆ.

ಘಟನೆಯೊಂದರಲ್ಲಿ, ಶ್ರೀಲಂಕಾ ನೌಕಾಪಡೆಯ ಬಹು ತಂಡಗಳು ತಲೈಮನ್ನಾರ್ ಬಳಿ ಮೀನುಗಾರಿಕೆ ನಡೆಸುತ್ತಿದ್ದ ರಾಮೇಶ್ವರಂನಿಂದ 23 ಭಾರತೀಯ ಮೀನುಗಾರರನ್ನು ಸುತ್ತುವರೆದು, ತದನಂತರ ಅವರನ್ನು ಬಂಧಿಸಿದೆ. ಮೀನುಗಾರರ ಮೂರು ದೋಣಿಗಳನ್ನು ತಲೈಮನ್ನಾರ್ ನೌಕಾ ಶಿಬಿರಕ್ಕೆ ಕರೆದೊಯ್ಯುವ ಮುನ್ನ ವಶಪಡಿಸಿಕೊಂಡಿದೆ.

ಇದೇ ರೀತಿಯ ಮತ್ತೊಂದು ಘಟನೆಯಲ್ಲಿ ನೆಡುಂತೀವು ಬಳಿ 14 ಮೀನುಗಾರರನ್ನು ಬಂಧಿಸಲಾಗಿದ್ದು, ಅವರ ಎರಡು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನಂತರ ಅವರನ್ನು ಮಾಯಿಲಟ್ಟಿ ಶಿಬಿರಕ್ಕೆ ಕರೆದೊಯ್ಯಲಾಗಿದೆ. ಅಕ್ಟೋಬರ್ 14 ರಿಂದ ಇಲ್ಲಿಯವರೆಗೂ ಶ್ರೀಲಂಕಾ ನೌಕಾಪಡೆಯು 64 ಮೀನುಗಾರರನ್ನು ಬಂಧಿಸಿದೆ ಮತ್ತು ಪ್ರತ್ಯೇಕ ಘಟನೆಗಳಲ್ಲಿ 10 ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ವರದಿ ಉಲ್ಲೇಖಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು