ಕೇರಳ: ಕೇರಳ ರಾಜ್ಯಪಾಲರ ಮೇಲೆ ಕೆಲವು ಗೂಂಡಾಗಳು ದಾಳಿ ನಡೆಸಲು ಪ್ರಯತ್ನಿಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ದೆಹಲಿಗೆ ಪ್ರಯಾಣಿಸುವುದಕ್ಕಾಗಿ ತಿರುವಂನಂತಪುರಂ ಏಪೋರ್ಟ್ಗೆ ತೆರಳುತ್ತಿದ್ದ ವೇಳೆ ಗರ್ವನರ್ ಆರಿಫ್ ಮೊಹಮ್ಮದ್ ಖಾನ್ ಮೇಲೆ ಕೆಲ ಗೂಂಡಾಗಳು ಏಕಾಏಕಿ ಬಂದು ದಾಳಿ ನಡೆಸಲು ಮುಂದಾಗಿದ್ದರು.
ಘಟನೆಯ ಬಳಿಕ ತೀವ್ರ ಆಕ್ರೋಶಗೊಂಡ ಆರಿಫ್ ಮೊಹಮ್ಮದ್, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತನ್ನ ಮೇಲೆ ದೈಹಿಕ ಹಲ್ಲೆ ನಡೆಸಲು ಈ ರೀತಿ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಘಟನೆಯು ಆಕಸ್ಮಿಕವಲ್ಲ. ಬದಲಾಗಿ ಉದ್ದೇಶಪೂರ್ವಕವಾಗಿ ನನ್ನನ್ನೇ ಗುರಿಯಾಗಿಸಿಕೊಂಡು ನಡೆದ ಕೃತ್ಯ.ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ, ಇದು ಮುಖ್ಯಮಂತ್ರಿಗಳ ಕೆಲಸ. ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.