Categories: ಕೇರಳ

ಬಿಜೆಪಿ ಸಭೆಯಲ್ಲಿ ಆಕ್ರೋಶ ಸ್ಫೋಟ: ಸಭಾಂಗಣಕ್ಕೆ ನುಗ್ಗಿದ ದಿ.ಜ್ಯೋತಿಷ್ ಬೆಂಬಲಿಗರು

ಕಾಸರಗೋಡು: ಮಂಜೇಶ್ವರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶ ಸ್ಫೋಟಗೊಂಡಿದ್ದು, ಕಾರ್ಯಕರ್ತರ ಸಭೆ ನಡೆಯುತ್ತಿದ್ದ ಸಭಾಂಗಣಕ್ಕೆ ನುಗ್ಗಿದ ದಿ.ಜ್ಯೋತಿಷ್ ಬೆಂಬಲಿಗರು ದಾಂದಲೇ ನಡೆಸಿದ್ದಾರೆ.

ಹಿಂದೂ ನಾಯಕ ದಿ.ಜ್ಯೋತಿಷ್ ಸಾವಿಗೆ ನ್ಯಾಯ ಸಿಗೋವರೆಗೂ ಬಿಜೆಪಿ ಸಭೆ ನಡೆಯಲು ಬಿಡಲ್ಲ ಎಂದಿದ್ದಾರೆ. ಜ್ಯೋತಿಷ್ ಸಾವಿಗೆ ನ್ಯಾಯ ಕೊಡಿಸುತ್ತೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರವೀಶ್ ತಂತ್ರಿ ಹೇಳಿದ್ದರು. ಆದ್ರೆ ದಿ.ಜ್ಯೋತಿಷ್ ಸಾವಿನ ವಿಚಾರದಲ್ಲಿ ಒಂದು ತೀರ್ಮಾನ ಕೈಗೊಳ್ಳಲ್ಲದೇ ಬಿಜೆಪಿಯ ಯಾವ ಸಭೆಯನ್ನ ನಡೆಯಲು ಬಿಡೋದಿಲ್ಲ. ಕಾಸರಗೋಡಿನ ಬಿಜೆಪಿಯ ಕೆಲ ನಾಯಕರ ಷಡ್ಯಂತ್ರದಿಂದ ಜ್ಯೋತಿಷ್ ಸಾವಾಗಿದೆ. ಆರ್ ಎಸ್ ಎಸ್ ನ ಬಿ.ಟಿ. ವಿಜಯನ್, ವಿನೋದ್, ದಯಾನಂದ್ ಕೊಲೆ ಕೇಸಿನ ರೂವಾರಿ ಜೊತೆ ಬಿಜೆಪಿಯವರ ಸಂಪರ್ಕವಿದೆ.

ಸಿಪಿಎಂನ ಕೊಗ್ಗು ಜೊತೆ ಸೇರಿಕೊಂಡು ಬಿಜೆಪಿಗರು ನಾಲಾಯಕ್ ರಾಜಕಾರಣ ಮಾಡುತ್ತಿದ್ದಾರೆ. ಈ ಕೂಡಲೇ ಸ್ಥಳೀಯ ಬಿಜೆಪಿ ನಾಯಕರಾದ ಶ್ರೀಕಾಂತ್, ಸುರೇಶ್ ಶೆಟ್ಟಿ, ಮಣಿಕಂಠ ರೈಯನ್ನ ಬಿಜೆಪಿಯಿಂದ ಉಚ್ಛಾಟಿಸ ಬೇಕು.

ಈ ಮೂವರು ಬಿಜೆಪಿ ನಾಯಕರು ಸಿಪಿಎಂನ ಕೊಗ್ಗು ಜೊತೆ ಸೇರಿರುವುದೇ ಜ್ಯೋತಿಷ್ ಸಾವಿಗೆ ಕಾರಣ. ಜ್ಯೋತಿಷ್ ಸಾವಿಗೆ ನ್ಯಾಯ ಸಿಗೋವರೆಗೂ ನ ಬಿಜೆಪಿಗರ ಸಭೆ ನಡೆಯಲು ಕಾಸರಗೋಡು ಜಿಲ್ಲೆಯಲ್ಲಿ ಬಿಡಲ್ಲ ಎಂದು ಕಾಸರಗೋಡು ಬಿಜೆಪಿಗೆ ದಿ.ಜ್ಯೋತಿಷ್ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಸಭೆ ನಡೆಯಬೇಕಾದ್ರೆ ಜ್ಯೋತಿಷ್ ಸಾವಿನ ವಿಚಾರದಲ್ಲಿ ತೀರ್ಮಾನ ಆಗ್ಬೇಕು. ಈ ತೀರ್ಮಾನ ಆಗೋವರೆಗೂ ಬಿಜೆಪಿಗೆ ಭಾರೀ ಹಿನ್ನಡೆ ಸಾಧ್ಯತೆಯಿದೆ.

ಹೀಗಾಗಿ ಕಾಸರಗೋಡು ಲೋಕಸಭಾ ಬಿಜೆಪಿ ಅಭ್ಯರ್ಥಿ ಎಂ.ಎಲ್. ಅಶ್ವಿನಿಗೆ ಆತಂಕ ಶುರುವಾಗಿದೆ. ಕಾಸರಗೋಡಿನಾದ್ಯಂತ ಅನೇಕ ಬೆಂಬಲಿಗರನ್ನು ದಿ.ಜ್ಯೋತಿಷ್ ಅಭಿಮಾನಿಗಳನ್ನು ಹೊಂದಿದ್ದೃು.

ಹೀಗಾಗಿ ಅಭಿಮಾನಿಗಳು ತಿರುಗಿಬಿದ್ದಲ್ಲಿ ಬಿಜೆಪಿಗೆ ಹಿನ್ನಡೆ ಖಚಿತವಾಗಿದೆ. 2022 ಫೆ.15 ರಂದು ಜ್ಯೋತಿಷ್ ಸಾವಾಗಿತ್ತು. ಆರ್ ಎಸ್ ಎಸ್ ನಲ್ಲಿ ಗುರುತಿಸಿಕೊಂಡು ಪ್ರಬಲ ನಾಯಕನಾಗಿ ಮುನ್ನುಗ್ಗುತ್ತಿದ್ದರು ಜ್ಯೋತಿಷ್. ಕಾಸರಗೋಡು ಜಿಲ್ಲೆಯಲ್ಲೇ ಹಿಂದೂ ಹುಲಿ ಎಂದು ಜ್ಯೋತಿಷ್ ಗುರುತಿಸಿಕೊಂಡಿದ್ದರು.

Nisarga K

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

2 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

2 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

2 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

2 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

4 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

4 hours ago