News Karnataka Kannada
Monday, April 29 2024
ಕೇರಳ

ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲೇಬಾರದು: ಜನರಿಗೆ ಸಿಎಂ ಕರೆ

BJP should not come back to power at Centre: CM to people
Photo Credit : IANS

ಕಣ್ಣೂರು: ಬಿಜೆಪಿ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಭಯ ಮತ್ತು ಆತಂಕವನ್ನು ಸೃಷ್ಟಿಸುತ್ತಿದೆ. ಒಂದು ವೇಳೆ ಬಿಜೆಪಿ ಮೂರನೇ ಬಾರಿಯೂ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದರೆ, ದೇಶವು ದುಸ್ತರವಾದ ಅಪಾಯವನ್ನು ಎದುರಿಸಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದರು.

ಮುಂದಾಗುವ ಅಪಾಯವನ್ನು ತಪ್ಪಿಸಬೇಕಾಗಿದೆ ಎಂಬುದು ಸಾರ್ವಜನಿಕ ಅಭಿಪ್ರಾಯವಾಗಿದೆ. ಬಿಜೆಪಿಯನ್ನು ಸೋಲಿಸುವ ಮತ್ತು ಅದು ಮುಂದೆ ಮತ್ತೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವ ಉದ್ದೇಶದಿಂದ ಜಾತ್ಯತೀತ ಮನೋಭಾವದ ಎಲ್ಲ ಪಕ್ಷಗಳು ಒಂದಾಗಿವೆ. ಜನರ ಏಕೀಕೃತ ಕೂಟವನ್ನು ರಚಿಸಲಾಗಿದೆ. ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲೇಬಾರದು ಎಂದು ಕೇರಳಿಗರಿಗೆ ಸಿಎಂ ಕರೆ ನೀಡಿದ್ದಾರೆ. ಅಲ್ಲದೇ ಜೆಪಿ, ಸಂಘಪರಿವಾರ ಅದನ್ನು ಬದಲಾಯಿಸಲು ಹೊರಟಿದೆ ಎಂದು ಪಿಣರಾಯಿ ಆರೋಪ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು