ಎರ್ನಾಕುಲಂ: ಕೇರಳದ ಎರ್ನಾಕುಲಂ ನಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಕನ್ವೆನ್ಷನ್ ಹಾಲ್ ಒಂದರಲ್ಲಿ ಪ್ರಾರ್ಥನೆ ಮಾಡುವ ಸಂದರ್ಭದಲ್ಲಿ ಸ್ಪೋಟಗೊಂಡು ಓರ್ವ ಸಾವನ್ನಪ್ಪಿದ್ದು, 24 ಜನರಿಗೆ ಗಾಯವಾಗಿರುವ ಘಟನೆ ಸಂಭವಿಸಿತ್ತು. ಈ ಘಟನೆಯ ಬೆನ್ನಲ್ಲೇ ಸಿಎಂ ಪಿನರಾಯಿ ವಿಜಯನ್ ಅವರು ನಾಳೆ ಸರ್ವಪಕ್ಷ ಸಭೆಪಯನ್ನು ಕರೆದಿದ್ದಾರೆ.
ಈ ಕುರಿತಂತೆ ಕೇರಳ ಸಿಎಂ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ಕೇರಳದ ಕಲಮಸ್ಸೆರಿ ಸ್ಫೋಟ ಪ್ರಕರಣ ಸಂಬಂಧ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರ್ವಪಕ್ಷ ಸಭೆ ಕರೆದಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸಚಿವಾಲಯದ ಮುಖ್ಯಮಂತ್ರಿಗಳ ಕಾನ್ಫರೆನ್ಸ್ ಹಾಲ್ನಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ ಎಂದು ತಿಳಿಸಿದೆ.