ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ ವಿಧಿವಶರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಅವರು ಫೆಬ್ರುವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು(ಜುಲೈ 18) ಕೊನೆಯುಸಿರೆಳೆದಿದ್ದಾರೆ.
ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಉಮ್ಮನ್ ಚಾಂಡಿ 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ಒಮನ್ ಚಾಂಡಿ 1970 ರಲ್ಲಿ ಪುತ್ತುಪಲ್ಲಿ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಸಾರ್ವಜನಿಕ ಸೇವೆಯಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲು ಶ್ರಮಿಸಿದ್ದ ಒಮ್ಮನ್ ಚಾಂಡಿಗೆ 2013 ರಲ್ಲಿ ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.