Categories: ಕೇರಳ

ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದ ಹೈಕೋರ್ಟ್

ತಿರುವನಂತಪುರಂ: ತನ್ನ ಅಪ್ರಾಪ್ತ ಸಹೋದರನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ 12 ವರ್ಷದ ಅಪ್ರಾಪ್ತ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಲು ಕೇರಳ ಹೈಕೋರ್ಟ್ ನಿರಾಕರಿಸಿದೆ.

ಭ್ರೂಣವು 34 ವಾರಗಳ ಗರ್ಭಾವಸ್ಥೆಯನ್ನು ತಲುಪಿದ್ದ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿದೆ ಎಂದು ಗರ್ಭಾವಸ್ಥೆಯನ್ನು ಅಂತ್ಯಗೊಳಿಸುವ ಆಯ್ಕೆಯನ್ನು ನ್ಯಾಯಾಲಯವು ತಳ್ಳಿಹಾಕಿತು. ಇದು ಅಪ್ರಾಪ್ತರಿಗೆ ಶಾರೀರಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಕೋರ್ಟ್ ಹೇಳಿದೆ.

ಇತ್ತೀಚಿನವರೆಗೂ ಹುಡುಗಿಯ ಪೋಷಕರಿಗೆ ಮಗಳು ಗರ್ಭಿಣಿ ಆಗಿದ್ದಾಳೆ ಎಂಬುದರ ಬಗ್ಗೆ ತಿಳಿದಿರಲಿಲ್ಲ ಎಂದು ಲೈವ್ ಲಾ ವರದಿ ಮಾಡಿದೆ.

ಲೈವ್ ಲಾ ಪ್ರಕಾರ, ʼಭ್ರೂಣವು ಈಗಾಗಲೇ 34 ವಾರಗಳ ಗರ್ಭಾವಸ್ಥೆಯನ್ನು ತಲುಪಿದೆ. ಈಗ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿದ್ದು, ಗರ್ಭಾಶಯದ ಹೊರಗೆ ತನ್ನ ಜೀವನಕ್ಕಾಗಿ ತಯಾರಿ ನಡೆಸುತ್ತಿದೆ. ಈ ಹಂತದಲ್ಲಿ ಗರ್ಭಪಾತ ಸರಿಯಲ್ಲ, ಆದರೆ ಅಸಾಧ್ಯವಲ್ಲ.ಆದ್ದರಿಂದ, ಮಗುವನ್ನು ಹುಟ್ಟಲು ಅನುಮತಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾ. ದೇವನ್ ರಾಮಚಂದ್ರನ್ ಅವರು ಅಪ್ರಾಪ್ತ ಬಾಲಕಿಯು ಆಕೆಯ ಪೋಷಕರ ರಕ್ಷಣೆ ಮತ್ತು ಅರ್ಜಿದಾರರ ಕಸ್ಟಡಿಯಲ್ಲಿರಬೇಕು ಎಂದು ನಿರ್ದೇಶನ ನೀಡಿದರು. ಆರೋಪ ಮಾಡಿರುವ ಸಹೋದರನನ್ನು ಬಾಲಕಿಯಿಂದ ದೂರವಿಡುವಂತೆ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಪೋಷಕರಿಗೆ ನ್ಯಾಯಾಲಯ ಸೂಚನೆ ನೀಡಿದೆ.

Ashika S

Recent Posts

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

2 mins ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

18 mins ago

ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ: ಹವಮಾನ ಇಲಾಖೆ

ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ…

21 mins ago

ʼನಾನು ನೋಡೋಕೆ ಅಷ್ಟೇನೂ ಚೆನ್ನಾಗಿಲ್ಲ ಅಂತ ಒಳ್ಳೆಯ ಸಿನಿಮಾ ಅವಕಾಶಗಳು ಬರಲಿಲ್ಲʼ

ಟಾಲಿವುಡ್​ ನಟ ಅಲ್ಲು ಅರ್ಜುನ್​ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು…

31 mins ago

ಮಳೆ ಸುರಿದ ಖುಷಿಗೆ ಕಾಡು ಬಸವೇಶ್ವರನಿಗೆ ವಿಶೇಷ ಪೂಜೆ

ನಂಜನಗೂಡು ತಾಲೂಕಿನ  ಈಶ್ವರಗೌಡನ ಹಳ್ಳಿ ಗ್ರಾಮದಲ್ಲಿ  ವರ್ಷದ ಮೊದಲ ಮಳೆ ಸುರಿದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ರಾಜ್ಯದ ಜನತೆಗೆ ಹಾಗೂ ರೈತರಿಗೆ…

39 mins ago

ಮತದಾನದ ಮರುದಿನ ಆಲಗೂರ್ ನಿರಾಳ: ಸಚಿವ ಪಾಟೀಲರ ಜೊತೆ ಊಟ, ಮನೆಯವರ ಜೊತೆ ಮಾತು

ಲೋಕಸಭೆ ಚುನಾವಣೆ ಮಂಗಳವಾರ ಮುಗಿದು ಹೋಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತದಾನದ ಮರು ದಿನ ನಿರಾಳ ನಗೆ ಬೀರುತ್ತ ಓಡಾಡಿದ್ದು ಕಂಡು…

57 mins ago