ತಿರುವನಂತಪುರಂ: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಗುರುವಾರದವರೆಗೆ ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕನ್ಯಾಕುಮಾರಿ ಪ್ರದೇಶ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ಚಂಡಮಾರುತದ ಪ್ರಭಾವದಿಂದಾಗಿ ಈ ಮಳೆಯು ಸುರಿಯಲಿದೆ ಎಂದು ತಿಳಿದುಬಂದಿದೆ.
ತಿರುವನಂತಪುರಂ, ಕೊಲ್ಲಂ ಮತ್ತು ಎರ್ನಾಕುಲಂ ಜಿಲ್ಲೆಗಳಿಗೆ ಮಂಗಳವಾರ ಹಳದಿ ಎಚ್ಚರಿಕೆ ನೀಡಲಾಗಿದೆ. ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇಡುಕ್ಕಿ ಮತ್ತು ಪತ್ತನಂತಿಟ್ಟದಲ್ಲಿ ಗುರುವಾರದವರೆಗೂ ಭಾರೀ ಮಳೆ ಮುಂದುವರಿಯಲಿದೆ. ಮುಂದಿನ ಎರಡು ದಿನಗಳವರೆಗೆ ಇಡುಕ್ಕಿಗೆ ಆರೆಂಜ್ ಅಲರ್ಟ್ ಮತ್ತು
ಎರ್ನಾಕುಲಂನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ತಿರುವನಂತಪುರಂ, ಪತ್ತನಂತಿಟ್ಟ ಮತ್ತು ಇಡುಕ್ಕಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮಳೆಯಾಗಿದೆ. ಭಕ್ತರ ದಂಡು ಹರಿದು ಬರುತ್ತಿರುವ ಶಬರಿಮಲೆಯಲ್ಲೂ ಭಾರೀ ಮಳೆಯಾಗಿದೆ.
ತಮಿಳುನಾಡಿನ ತಿರುನೆಲ್ವೇಲಿ, ತೆಂಕಶಿ ಮತ್ತು ಥೇಣಿ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ರಾಮನಾಥಪುರಂ, ವಿರುದುನಗರ, ತೂತುಕುಡಿ, ಮಧುರೈ, ದಿಂಡಿಗಲ್, ತಿರುಪುರ್, ಕೊಯಮತ್ತೂರು, ನೀಲಗಿರಿ, ತಿರುವಳ್ಳೂರು, ರಾಣಿಪೇಟ್, ಕಾಂಚೀಪುರಂ, ಚೆನ್ನೈ, ಚೆಂಗಲ್ಪಟ್ಟು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಿರುವೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.