ತಿರುವನಂತಪುರ: ಬೆಲೆಕಟ್ಟಲಾಗದ ಅಮೂಲ್ಯವಾದ ಖಜಾನೆ ಹೊಂದಿರುವ ತಿರುವನಂತರಪುದ ಶ್ರೀ ಪದ್ಮನಾಭ ಸ್ವಾಮಿ ದೇವಾಲಯ ಪ್ರದೇಶದಲ್ಲಿ ಭದ್ರತೆಯ ಕಾರಣಕ್ಕಾಗಿ ಹೆಲಿಕಾಪ್ಟರ್ ಹಾರಾಟಕ್ಕೆ ನಿರ್ಬಂಧ ವಿಧಿಸಲು ನಗರ ಪೊಲೀಸರು ಮುಂದಾಗಿದ್ದಾರೆ.
ಇತ್ತೀಚೆಗಷ್ಟೇ ದೇವಾಲಯವಿರುವ ಪ್ರದೇಶದ ಆಗಸದಲ್ಲಿ ಉದ್ಯಮಿಯೊಬ್ಬರು ಖಾಸಗಿ ಹೆಲಿಕಾಪ್ಟರ್ನಲ್ಲಿ ಪ್ರದಕ್ಷಿಣೆ ಹಾಕಿದ್ದರು. ಇದಾದ ಬಳಿಕ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ದೇವಾಲಯದ ಪ್ರದೇಶವನ್ನು ಬಿಗಿಭದ್ರತೆಯ ಪ್ರದೇಶ ಎಂದು ಘೋಷಿಸಲಾಗಿದೆ. ಅಷ್ಟೇ ಅಲ್ಲ, ಡ್ರೋನ್ಗಳ ಹಾರಾಟವನ್ನೂ ನಿರ್ಬಂಧಿಸಲಾಗಿದೆ. ಇದರ ಜೊತೆಗೆ ಪೊಲೀಸರು ಹೆಲಿಕಾಪ್ಟರ್ ಹಾರಾಟಕ್ಕೆ ನಿರ್ಬಂಧ ವಿಧಿಸಲು ಮುಂದಾಗಿದ್ದಾರೆ.