Categories: ಕೇರಳ

ರಬ್ಬರ್‌ ದರ 300ಕ್ಕೇರಿಸಿದರೆ ಕೇರಳದಿಂದ ಬಿಜೆಪಿ ಎಂಪಿ: ಸಂಚಲನಕ್ಕೆ ಕಾರಣವಾದ ಧರ್ಮಗುರು ಹೇಳಿಕೆ

ತಿರುವನಂತಪುರಂ: ಕೇಂದ್ರ ಸರ್ಕಾರ ರಬ್ಬರ್ ಬೆಲೆಯನ್ನು ಕಿಲೋಗ್ರಾಂಗೆ 300 ರೂ.ಗೆ ಏರಿಸಿದರೆ, ಚರ್ಚ್ ಕೇರಳದಿಂದ ಬಿಜೆಪಿ ಎಂಪಿ ಆಯ್ಕೆಯಾಗಲು ಬಿಜೆಪಿಗೆ ಸಹಾಯ ಮಾಡುತ್ತೇವೆ ಎಂದು ರೋಮನ್ ಕ್ಯಾಥೋಲಿಕ್ ಚರ್ಚ್‌ ತಲಸ್ಸೆರಿ ಆರ್ಚ್ ಬಿಷಪ್ ಮಾರ್ ಜೋಸೆಫ್ ಪಾಂಪ್ಲಾನಿ ಹೇಳಿದ್ದಾರೆ.

ಭಾನುವಾರ ತಲಶ್ಶೇರಿ ಆರ್ಚ್ ಡಯಾಸಿಸ್‌ನ ಕ್ಯಾಥೋಲಿಕ್ ರೈತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಕ್ಯಾಥೋಲಿಕ್ ಚರ್ಚ್ ರಾಜಕೀಯ ನಿರ್ಧಾರದ ಹಿಂದೆ ಪ್ರಮುಖ ಪಾತ್ರ ವಹಿಸುತ್ತಿದ್ದು, ರಾಜ್ಯದ ಹೆಚ್ಚಿನ ರಬ್ಬರ್ ತೋಟಗಳು ಕ್ಯಾಥೋಲಿಕ್ ರೈತರ ಒಡೆತನದಲ್ಲಿದೆ. ಡಿಸೆಂಬರ್ 2022 ಮತ್ತು ಮಾರ್ಚ್ 2023 ರ ನಡುವೆ ರಬ್ಬರ್ ಪ್ರತಿ ಕೆಜಿಗೆ ರೂ 131 ರಿಂದ ರೂ 151 ರ ನಡುವೆ ಮಾರಾಟವಾಗುತ್ತಿದೆ.

ಕ್ಯಾಥೋಲಿಕ್ ಬಿಷಪ್ ಅವರ ಈ ಬಹಿರಂಗ ಹೇಳಿಕೆಯು ಕೇರಳದ ರಾಜಕೀಯ ವಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಕೇರಳದ ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಸಚಿವ ಮಹಮ್ಮದ್‌ ರಿಯಾಜ್‌ ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನಾನು ಬಿಷಪ್ ಅವರ ಹೇಳಿಕೆ ಗಮನಿಸಿಲ್ಲ. ಹೇಳಿಕೆ ಬಗ್ಗೆ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ಜಾಗರೂಕ ಉತ್ತರ ನೀಡಿದ್ದಾರೆ.

ಆರ್‌ಎಸ್‌ಎಸ್ 2025ರಲ್ಲಿ ಶತಮಾನೋತ್ಸವ ಆಚರಿಸುತ್ತಿದ್ದು, ದೇಶವನ್ನು ಹಿಂದು ರಾಷ್ಟ್ರ ಮಾಡುವ ಗುರಿ ಹೊಂದಿದೆ. ಇದರಿಂದ ಮುಸ್ಲಿಮರು, ಕ್ರಿಶ್ಚಿಯನ್ನರು ಸೇರಿದಂತೆ ದೇಶದ ಅಲ್ಪಸಂಖ್ಯಾತರು ಭಯದಲ್ಲಿದ್ದಾರೆ ಎಂದು ಸಚಿವರು ಹೇಳಿದರು.

Umesha HS

Recent Posts

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

11 mins ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

20 mins ago

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

37 mins ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

1 hour ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

1 hour ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

2 hours ago