News Karnataka Kannada
Sunday, May 05 2024
ಕೇರಳ

ಕೇರಳ: 23 ವರ್ಷದ ಮಹಿಳೆ ಶವವಾಗಿ ಪತ್ತೆ

ಕೊಡಗು-ಮೈಸೂರು ಗಡಿ ಗ್ರಾಮ ಗಿರಗೂರಿನಲ್ಲಿ ರೈಫಲ್​ನಿಂದ ಗುಂಡು ಹಾರಿ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.
Photo Credit : Pixabay

ತಿರುವನಂತಪುರಂ, ಅ.22: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತವರೂರಾದ ಕಣ್ಣೂರಿನಲ್ಲಿ 23 ವರ್ಷದ ಮಹಿಳೆಯ ಕತ್ತು ಸೀಳಿದ ಘಟನೆ ಶನಿವಾರ ನಡೆದಿದೆ.

ಮಹಿಳೆಯ ಮನೆಯಲ್ಲೇ ಈ ಘಟನೆ ನಡೆದಿದೆ. ಮುಖವಾಡ ಧರಿಸಿದ್ದ ಓರ್ವ ವ್ಯಕ್ತಿ ಈ ಪ್ರದೇಶದಲ್ಲಿ ಕಂಡುಬಂದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಿಷ್ಣು ಪ್ರಿಯಾ ಎಂದು ಗುರುತಿಸಲಾದ ಮಹಿಳೆಯ ಕುಟುಂಬ ಸದಸ್ಯರು ತಮ್ಮ ಮನೆಯ ಹತ್ತಿರದ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಹೋಗಿ ಹಿಂತಿರುಗಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ವೈದ್ಯಕೀಯ ಪ್ರಯೋಗಾಲಯದಲ್ಲಿ ಕೆಲಸ ಮಾಡುವ ವಿಷ್ಣು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಅವರು ಆಘಾತಕ್ಕೊಳಗಾದರು.

ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು