ತಿರುವನಂತಪುರಂ, ಅ.22: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ತವರೂರಾದ ಕಣ್ಣೂರಿನಲ್ಲಿ 23 ವರ್ಷದ ಮಹಿಳೆಯ ಕತ್ತು ಸೀಳಿದ ಘಟನೆ ಶನಿವಾರ ನಡೆದಿದೆ.
ಮಹಿಳೆಯ ಮನೆಯಲ್ಲೇ ಈ ಘಟನೆ ನಡೆದಿದೆ. ಮುಖವಾಡ ಧರಿಸಿದ್ದ ಓರ್ವ ವ್ಯಕ್ತಿ ಈ ಪ್ರದೇಶದಲ್ಲಿ ಕಂಡುಬಂದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ವಿಷ್ಣು ಪ್ರಿಯಾ ಎಂದು ಗುರುತಿಸಲಾದ ಮಹಿಳೆಯ ಕುಟುಂಬ ಸದಸ್ಯರು ತಮ್ಮ ಮನೆಯ ಹತ್ತಿರದ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಹೋಗಿ ಹಿಂತಿರುಗಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ವೈದ್ಯಕೀಯ ಪ್ರಯೋಗಾಲಯದಲ್ಲಿ ಕೆಲಸ ಮಾಡುವ ವಿಷ್ಣು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಅವರು ಆಘಾತಕ್ಕೊಳಗಾದರು.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.