ಕೇರಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಚೇರಿ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ರಾಹುಲ್ ಗಾಂಧಿ ಕಚೇರಿ ಮೇಲಿನ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇನೆ. ದೇಶದಲ್ಲಿ, ಪ್ರತಿಯೊಬ್ಬರಿಗೂ ಅಭಿಪ್ರಾಯ ಮಂಡಿಸಲು, ಪ್ರತಿಭಟಿಸಲು ಹಕ್ಕಿದೆ. ಆದರೆ ಕಾನೂನು ಉಲ್ಲಂಸಿ ಅಲ್ಲ ಎಂದಿರುವ ಅವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಲಿದೆ ಎಂದಿದ್ದಾರೆ.
ಈ ಘಟನೆಯ ಹಿಂದೆ ಆಡಳಿತಾರೂಢ ಸಿಪಿಐಎಂ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿರುವ ಎಸ್ಎಫ್ಐ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿದೆ.