ತಿರುವನಂತಪುರಂ: ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿರುದ್ಧ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ಈ ನಿಟ್ಟಿನಲ್ಲಿ ನಿರ್ಣಯ ಅಂಗೀಕರಿಸಿದ ಏಕೈಕ ರಾಜ್ಯ ಕೇರಳವಾಗಿದೆ.
ಇಡೀ ದೇಶದ ಜನತೆಯ ಮೇಲೆ ಪರಿಣಾಮ ಬೀರುವ, ಸಮಸ್ಯೆಗಳಿಗೆ ಕಾರಣವಾಗುವ ಏಕರೂಪ ನಾಗರಿಕ ಸಂಹಿತೆ ಕುರಿತು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಂತೆ ಕೇರಳ ವಿಧಾನಸಭೆ ನಿರ್ಣಯ ಕೈಗೊಂಡಿದೆ. ಈ ನಿರ್ಣಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಡಿಸಿದರು.
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಇದನ್ನು ಬೆಂಬಲಿಸಿದವು. ಏಕರೂಪ ನಾಗರಿಕ ಸಂಹಿತೆಯನ್ನು ಹೇರುವ ಕೇಂದ್ರ ಸರ್ಕಾರದ ಏಕಪಕ್ಷೀಯ ಮತ್ತು ಆತುರದ ಕ್ರಮವು ಸಂವಿಧಾನದ ಜಾತ್ಯತೀತ ಸ್ವರೂಪಕ್ಕೆ ವಿರುದ್ಧವಾಗಿದೆ ಎಂದು ನಿರ್ಣಯ ಹೇಳಿದೆ. ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ರದ್ದುಗೊಳಿಸುವಂತೆ ಒತ್ತಾಯಿಸುವ ನಿರ್ಣಯವನ್ನು ಕೇರಳ ಈ ಹಿಂದೆ ಕೈಗೊಂಡಿತ್ತು.