News Karnataka Kannada
Tuesday, May 07 2024
ಕೇರಳ

ಕೇರಳದ ಸಾಕ್ಷರತಾ ‘ರಾಯಭಾರಿ ಶತಾಯುಷಿ ಕಾರ್ತ್ಯಾಯನಿ ಅಮ್ಮ ವಿಧಿವಶ

Katyayini
Photo Credit : Twitter

ತಿರುವನಂತಪುರ: 96ನೇ ವಯಸ್ಸಿನಲ್ಲಿ ಕೇರಳದ ಸಾಕ್ಷರತಾ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ, ನಾರಿಶಕ್ತಿ ಪುರಸ್ಕೃತ ಕಾರ್ತ್ಯಾಯನಿ ಅಮ್ಮ ಅವರು ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರಿಗೆ 101 ವರ್ಷ ವಯಸ್ಸಾಗಿತ್ತು. ಪಾರ್ಶ್ವವಾಯು ತುತ್ತಾಗಿದ್ದ ಅವರು ಕೆಲ ದಿನಗಳಿಂದ ಹಾಸಿಗೆ ಹಿಡಿದಿದ್ದರು. 96ನೇ ವಯಸ್ಸಿನಲ್ಲಿ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ‘ಅತಿ ಹಿರಿಯ ವಿದ್ಯಾರ್ಥಿ’ ಎನಿಸಿಕೊಂಡಿದ್ದರು. ಅಲ್ಲದೆ ನಾಲ್ಕನೇ ತರಗತಿಗೆ ಸಮಾನವಾದ ‘ಅಕ್ಷರಲಕ್ಷಂ’ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿದ್ದರು.

ಸಾಕ್ಷರತಾ ಪರೀಕ್ಷೆಯಲ್ಲಿ ರ್ಯಾಂಕ್​ ಗಳಿಸಿದ ಹಿನ್ನೆಲೆ 2018ರಲ್ಲಿ ಕಾತ್ಯಾಯನಿ ಅಮ್ಮಗೆ ಕೇಂದ್ರ ಸರ್ಕಾರವು ನಾರಿಶಕ್ತಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಬಳಿಕ ಇವರನ್ನು 53 ಸದಸ್ಯ ರಾಷ್ಟ್ರಗಳಲ್ಲಿ ದೂರ ಶಿಕ್ಷಣ ಪ್ರಚಾರಕ್ಕಾಗಿ ಕಾಮನ್​ವೆಲ್ತ್​ ಲರ್ನಿಂಗ್​ನ ಸದ್ಭಾವನಾ ರಾಯಭಾರಿಯನ್ನಾಗಿ ಆಯ್ಕೆ ಮಾಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು