Categories: ಕೇರಳ

ಕುಂಬಳೆ: ಅನಂತಪುರದಲ್ಲಿ ಪುವೆಂಪು ನೆಂಪು ಸಮ್ಮಾನ್ ಪ್ರದಾನ ಹಾಗೂ ತುಳು ಲಿಪಿ ದಿನಾಚರಣೆ

ಕುಂಬಳೆ: ತುಳು ಲಿಪಿ ಸಂಶೋಧಕ,ವಿದ್ವಾಂಸ,ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ತುಳುವರ್ಲ್ಡ್ ಮಂಗಳೂರು ಹಾಗೂ ಸ್ಥಳೀಯ ಸಂಘ ಸಂಸ್ಥೆ, ಪುವೆಂಪು ಅಭಿಮಾನಿಗಳ ಸಹಕಾರದಲ್ಲಿ “ಪುವೆಂಪು ನೆಂಪು 2022” ವಿವಿಧ ಕಾರ್ಯಕ್ರಮಗಳೊಂದಿಗೆ ಅನಂತಪುರದಲ್ಲಿ ಜರಗಿತು.ಇದರ ಅಂಗವಾಗಿ ಪುವೆಂಪು ಅವರ ಭಾವಚಿತ್ರ ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ಸರ್ವೋತ್ತಮ ಶೆಟ್ಟಿ ಅಬುಧಾಬಿ ವಹಿಸಿದ್ದರು. ಈ ಸಂದರ್ಭದಲ್ಲಿ ಚಲನಚಿತ್ರ ರಂಗದ ಖ್ಯಾತ ಹಿನ್ನಲೆ ಗಾಯಕ ರಮೇಶ್ಚಂದ್ರ ಬೆಂಗಳೂರು ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ. ಪಿ.ಎಸ್. ಎಡಪಡಿತ್ತಾಯ ಪುವೆಂಪು ಸಮ್ಮಾನ್ ಪ್ರದಾನಿಸಿದರು.ಸಭೆಯಲ್ಲಿ ತುಳು ಲಿಪಿಯ ಫಲಕವನ್ನು‌ ಕೇರಳ ತುಳು ಅಕಾಡೆಮಿ ಅಧ್ಯಕ್ಷ ಜಯಾನಂದ ಕುಮಾರ್ ಮಂಜೇಶ್ವರ ಅನಾವರಣಗೊಳಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್,ಶ್ರೀಕೃಷ್ಣಯ್ಯ ಅನಂತಪುರ, ವಿಜಯರಾಜ ಪುಣಿಂಚಿತ್ತಾಯ, ನ್ಯಾಯವಾದಿ ಥೋಮಸ್ ಡಿ.ಸೋಜ, ಕಾಸರಗೋಡು ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಭಾ ಅಧ್ಯಕ್ಷ ಅರವಿಂದ ಅಲೆವೂರಾಯ,ಅನಂತಪುರ ಶ್ರೀ ಅನಂತಪದ್ಮನಾಭ ಕ್ಷೇತ್ರ ಆಡಳಿತ ಮುಕ್ತೇಸರ ನ್ಯಾಯವಾದಿ ಉದಯ ಗಟ್ಟಿ, ತುಳುಕೂಟ ಕಾಸರಗೋಡು ಕಾರ್ಯದರ್ಶಿ ಬಿ.ಪಿ. ಶೇಣಿ,ಜೈ ತುಳುನಾಡು ಕಾಸರಗೋಡು ಅಧ್ಯಕ್ಷ ಹರಿಕಾಂತ ಕಾಸರಗೋಡು,ತುಳುವೆರೆ ಆಯನೋ ಕೂಟದ ಅಧ್ಯಕ್ಷ ಗೋಪಾಲಕೃಷ್ಣ ಕುಲಾಲ್ ವಾಂತಿಚ್ಚಾಲ್, ಸುಂದರ ಬಾರಡ್ಕ. ಕುಶಾಲಾಕ್ಷಿ ವಿ ಕುಲಾಲ್ ಕಣ್ವತೀರ್ಥ, ಜ್ಯೋತ್ಸ್ನಾ ಕಡೆಂದೆಲು, ರವೀಂದ್ರನ್ ಪಾಡಿ, ಶಾಂತಾರಾಮ ವಿ ಶೆಟ್ಟಿ, ವಾಣಿ ಪಿ.ಯಸ್ ನೀರ್ಚಾಲ್, ಡಾ. ರಾಜೇಶ್ ಭಟ್ ಮಂದಾರ,ಸೀತಾರಾಮ ಕುಂಜತ್ತಾಯ, ಶ್ರೀನಿವಾಸ ಆಳ್ವ ಕಳತ್ತೂರು ಮೊದಲಾವರು ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಪುವೆಂಪುರವರ ರಚನೆಯ ಹಾಡುಗಳನ್ನು ಪ್ರಭಾವತಿ ಕೆದಿಲಾಯ ಪುಂಡೂರು ಜಯಶ್ರೀ ಅನಂತಪುರ ಹಾಡಿದರು.ತುಳುವಲ್ಡ್ ನ ನಿರ್ದೇಶಕ ಡಾ.ರಾಜೇಶ್ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿದರು. ಎ.ಶ್ರೀನಾಥ್ ಕೊಲ್ಲಂಗಾನ ಸ್ವಾಗತಿಸಿ ರವಿ ನಾಯ್ಕಾಪು ಕಾರ್ಯಕ್ರಮ ನಿರೂಪಿಸಿದರು.ಭಾಸ್ಕರ್ ಕಾಸರಗೋಡು ವಂದಿಸಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago