ಪತ್ತನಂತಿಟ್ಟ: ದೇಶದ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಯಲ್ಲಿ ದೇವಾಲಯದ ಬಾಗಿಲುಗಳು ಇಂದು ತೆರಯಲಿವೆ. ಮಂಡಲ-ಮಕರವಿಳಕ್ಕು ಯಾತ್ರೆ ಆರಂಭದ ಹಿನ್ನೆಲೆಯಲ್ಲಿ ಗುರುವಾರ ಸಂಜೆ 5 ಗಂಟೆಗೆ ಕೇರಳದ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲದ ಬಾಗಿಲುಗಳು ತೆರೆಯಲಿವೆ. ತೀರ್ಥಯಾತ್ರೆ ಅಂಗವಾಗಿ ದೊಡ್ಡ ಸಂಖ್ಯೆಯ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಜನಸಂದಣಿ ನಿಯಂತ್ರಿಸಲು ಡೈನಾಮಿಕ್ ಕ್ಯೂ ನಿಯಂತ್ರಣ ವ್ಯವಸ್ಥೆ ಅಳವಡಿಲಾಗಿದೆ.
ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ, ತಂಗುವ ವ್ಯವಸ್ಥೆ, ದೇಗುಲದ ಬಳಿ 132 ಶೌಚಾಲಯಗಳು, ಐಸಿಯು ಸೇರಿದಂತೆ ಎಲ್ಲ ಸೌಲಭ್ಯಗಳು ಇರುವ ಆಸ್ಪತ್ರೆ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ವ್ಯವಸ್ಥೆಗಳು ಸಿದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಬರಿಮಲೆಗಾಗಿ ವಿಶೇಷವಾಗಿ ಕೇರಳ ರಸ್ತೆ ಸಾರಿಗೆ ನಿಗಮವು 473 ಬಸ್ಗಳ ಕಾರ್ಯಾಚರಣೆ ಆರಂಭಿಸಿದೆ.