ತಿರುವನಂತಪುರಂ: ಎರಡು ದಿನಗಳ ಕೇರಳ ಪ್ರವಾಸದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಮುಖಂಡರನ್ನು ಭೇಟಿಯಾಗಲಿದ್ದಾರೆ.
ಕ್ರಿಶ್ಚಿಯನ್ ಗುಂಪುಗಳ ವಿವಿಧ ಪಂಥಗಳ ಎಂಟು ಮುಖ್ಯಸ್ಥರನ್ನು ಪ್ರಧಾನಿ ಭೇಟಿ ಮಾಡಲಿದ್ದಾರೆ ಎಂದು ಕೇರಳ ಬಿಜೆಪಿ ಮೂಲಗಳು ಐಎಎನ್ಎಸ್ ಗೆ ತಿಳಿಸಿವೆ.
ಮೂಲಗಳ ಪ್ರಕಾರ, ಸಂಜೆ 7 ಗಂಟೆಗೆ ಸಭೆ ನಡೆಯಲಿದೆ. ಕೇರಳದ ಚುನಾವಣಾ ರಾಜಕೀಯ ಪ್ರಯತ್ನದಲ್ಲಿ ಕೇರಳ ಬಿಜೆಪಿ ಕ್ರಿಶ್ಚಿಯನ್ ಸಮುದಾಯವನ್ನು ಮನವೊಲಿಕೆ ಪ್ರಯತ್ನ ನಡೆಯುತ್ತಿದೆ.
ಈ ನಿಟ್ಟಿನಲ್ಲಿ ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಮುಖಂಡರನ್ನು ಭೇಟಿ ಮಾಡಿರುವುದು ರಾಜ್ಯ ಬಿಜೆಪಿಯ ಯತ್ನದ ಪ್ರಮುಖ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ.
ಕೊಚ್ಚಿಯಲ್ಲಿ ಬಿಜೆಪಿ ಯುವ ಘಟಕ, ಭಾರತೀಯ ಜನತಾ ಯುವ ಮೋರ್ಚಾ ಆಯೋಜಿಸಿರುವ ‘ಯುವಂ’ ಕಾರ್ಯಕ್ರಮದ ಭಾಗವಾಗಿ ಮೋದಿ 1 ಲಕ್ಷ ಯುವಕರೊಂದಿಗೆ ಸಂವಾದ ನಡೆಸಲಿದ್ದಾರೆ.
ಕೊಚ್ಚಿಯಲ್ಲಿ ಸೋಮವಾರ ವೆಂಡುರುತಿ ಸೇತುವೆಯಿಂದ ಥೇವರದ ಸೇಕ್ರೆಡ್ ಹಾರ್ಟ್ ಕಾಲೇಜಿನವರೆಗೆ 1.8 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ಕೇರಳ ಪೊಲೀಸರು ಭೇಟಿಗಾಗಿ ಭದ್ರತೆಯನ್ನು ಹೆಚ್ಚಿಸಿದ್ದು, 2,000 ಪೊಲೀಸರನ್ನು ನಿಯೋಜಿಸಲಾಗಿದೆ.