ಕೇರಳ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ವಯನಾಡಿನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಿದರು ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಹುಲ್ ಗಾಂಧಿ ಅವರ ರೋಡ್ ಶೋನಲ್ಲಿ ಭಾರಿ ಜನಸ್ತೋಮ ಕಂಡುಬಂತು.
ವಯನಾಡಿನ ಹಾಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಕ್ಷ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡಿನಲ್ಲಿ ಗೆಲುವು ಸಾಧಿಸಿದ್ದರು.
ರಾಹುಲ್ ಗಾಂಧಿ ಎರಡನೇ ಬಾರಿಗೆ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕೆ ಸುರೇಂದ್ರನ್ ಮಾತನಾಡಿ, ರಾಹುಲ್ ಗಾಂಧಿ ಅಂತಿಮವಾಗಿ ವಯನಾಡಿಗೆ ನಾಮಪತ್ರ ಸಲ್ಲಿಸಲು ಬರುತ್ತಿರುವುದು ಒಳ್ಳೆಯದು, ಇವರು ಕ್ಷೇತ್ರದಲ್ಲಿ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
Shri Rahul Gandhi ji, the next PM of India filed his nomination from #Wayanad today.
Wayanad is lucky to have the future PM from their area.@RahulGandhi 🔥@INCIndia @kharge @Bhatti_Mallu @RohitChINC @revanth_anumula @DeepaDasmunsi @PonnamLoksabha pic.twitter.com/h9FnP54F5d
— WithKotaNeelima (@WithKotaNeelima) April 3, 2024