ಕೇರಳ: ತಮಿಳುನಾಡಿನಿಂದ ಬಂದಿದ್ದ ಪ್ರವಾಸಿ ವಾಹನವೊಂದು ಆದಿಮಲಿ ಬಳಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 11 ಮಂದಿ ಗಾಯಗೊಂಡಿದ್ದು, ಒಂದು ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.
ಅಪಘಾತವು ಮಂಗಳವಾರ(ಮಾ.19)ರ ಸಂಜೆ 6 ರ ಸುಮಾರಿಗೆ ಸಂಭವಿಸಿದೆ. ಈ ವಾಹನದಲ್ಲಿ 14 ಜನರಿದ್ದರು ಮತ್ತು ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಉಳಿದವರು ಗಾಯಗೊಂಡಿದ್ದಾರೆ ಎಂದು ಆದಿಮಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರವಾಸಿಗರು ತಮಿಳುನಾಡಿನ ಥೇಣಿಯಿಂದ ಬಂದಿದ್ದು, ಇಲ್ಲಿನ ಮಂಕುಲಂಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.