ಕೇರಳ: ಕೇರಳದ ಇತಿಹಾಸದಲ್ಲಿ ಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.
ತೃತೀಯಲಿಂಗಿ ಜೋಗಿನಿ ನಿಶಾ ಕ್ರಾಂತಿ ಅವರು ಭಾನುವಾರ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾಮಿಯ ದರ್ಶನವನ್ನು ಪಡೆದಿದ್ದಾರೆ. ಆಕೆಯ ಟ್ರಾನ್ಸ್ಜೆಂಡರ್ ಗುರುತಿನ ಪತ್ರದ ಆಧಾರದ ಮೇಲೆ ಕೇರಳ ಸರ್ಕಾರ ಆಕೆಗೆ ಸ್ವಾಮಿಯ ದರ್ಶನವನ್ನು ಪಡೆಯಲು ಅವಕಾಶ ನೀಡಿತ್ತು. ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೃತೀಯಲಿಂಗಿಯೊಬ್ಬರು ಭೇಟಿ ನೀಡಿರುವುದು ಇದೇ ಮೊದಲು.
ತೆಲಂಗಾಣದ ನಲ್ಗೊಂಡ ಜಿಲ್ಲೆಯ ನರ್ಕಟ್ಪಲ್ಲಿ ಮಂಡಲದಲ್ಲಿರುವ ಚೆರ್ವುಗಟ್ಟು ಶ್ರೀ ಪಾರ್ವತಿ ಜಡಲ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮೋತ್ಸವಗಳು ನಡೆಯುತ್ತದೆ. ಇಲ್ಲಿನ ಪೂಜೆಗಳಲ್ಲಿ ಮಂಗಳಮುಖಿ ನಿಶಾ ಕ್ರಾಂತಿ ಅವರು ವಾರ್ಷಿಕ ಬ್ರಹ್ಮೋತ್ಸವಗಳಲ್ಲಿ ಮತ್ತು ಪ್ರತಿ ಅಮವಾಸ್ಯೆಯಲ್ಲಿ ಜೋಗಿಣಿಯಾಗಿ ಭಾಗವಹಿಸುತ್ತಾರೆ.