Categories: ಕೇರಳ

ಪುಟ್ಟ ಕಂದಮ್ಮನಿಗೆ ಹಾಲುಣಿಸಿ ಸಂತೈಸಿದ ಮಹಿಳಾ ಪೊಲೀಸ್: ಭಾರೀ ಮೆಚ್ಚುಗೆ

ತಿರುವನಂತಪುರಂ: ಈ ಹಿಂದೆ ತಾಯಿಯೊಬ್ಬರು ಮಗುವನ್ನು ಪರೀಕ್ಷಾ ಕೇಂದ್ರದ ಹೊರಗೆ ಬಿಟ್ಟು ಪರೀಕ್ಷೆ ಬರೆಯಲು ಹೋಗಿದ್ದಾಗ ಅಳುತ್ತಿದ್ದ ಪುಟ್ಟ ಕಂದಮ್ಮನನ್ನ ಮಹಿಳಾ ಪೊಲೀಸ್ ಸಮಾಧಾನ ಮಾಡಿದ್ದ ಘಟನೆಯೊಂದು ನಡೆದಿತ್ತು. ಇದೀಗ ಅಂಥದ್ದೇ ಮನಸ್ಸಿಗೆ ಮುಟ್ಟುವಂತಹ ಘಟನೆಯೊಂದು ಕೇರಳದಲ್ಲಿ ನಡೆದಿದೆ.

ಕೇರಳದ ಕೊಚ್ಚಿಯಲ್ಲಿ ಈ ಘಟನೆ ನಡೆದಿದ್ದು, ನಾಲ್ಕು ತಿಂಗಳ ಮಗುವಿಗೆ ಸ್ವತಃ ತಾವೇ ಎದೆ ಹಾಲುಣಿಸುವ ಮೂಲಕ ತಾಯಿ ಪ್ರೀತಿ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಮಹಿಳಾ ಪೊಲೀಸ್ ಅಧಿಕಾರಿಗೆ ಇಲಾಖೆ ಮತ್ತು ಸಾರ್ವಜನಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಿಹಾರ ಮೂಲದ ಮಗುವಿನ ತಾಯಿಗೆ ಶಸ್ತ್ರಚಿಕಿತ್ಸೆಯೊಂದು ನಡೆದಿತ್ತು. ಆ ಬಳಿಕ ಆಕೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆ ತಾಯಿಯನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆಕೆಯ ಮೂರು ಮಕ್ಕಳು ಆಸ್ಪತ್ರೆಯ ವಾರ್ಡ್ ನಿಂದ ಹೊರಗಿದ್ದು, ಮತ್ತೋರ್ವ ನಾಲ್ಕು ತಿಂಗಳ ಹಸುಗೂಸು ತಾಯಿಯ ಪಕ್ಕದಲ್ಲೇ ಮಲಗಿದ್ದು, ಹಸಿವಿನಿಂದ ಅಳುತ್ತಿತ್ತು. ಹಸುವಿನಿಂದ ಕಂಗೆಟ್ಟಿದ್ದ ಕಂದಮ್ಮ ಅಳುತ್ತಿರುವುದನ್ನು ಗಮನಿಸಿದ ಮಹಿಳಾ ಪೊಲೀಸ್ ಅಧಿಕಾರಿ ಆರ್ಯಾ, ಮಗುವನ್ನು ಎತ್ತಿಕೊಂಡು ಎದೆಹಾಲುಣಿಸಿ ಮಮತೆ ತೊರಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿ ಆರ್ಯಾ ಅವರಿಗೆ 9 ತಿಂಗಳ ಮಗುವಿದೆ. ಪೊಲೀಸ್ ಅಧಿಕಾರಿ ಕಾರ್ಯಕ್ಕೆ ನಗರದ ಪೊಲೀಸರು, ಆಸ್ಪತ್ರೆ ವೈದ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ashika S

Recent Posts

ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದಿಂದ ಜಗಜ್ಯೋತಿ ಬಸವೇಶ್ವರ ಹಾಗೂ ಮಹಾನಸಾದ್ವಿ ಹೇಮರಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ತಹಸೀಲ್ದಾ‌ರ್ ಮಲ್ಲಿಕಾರ್ಜುನ ಹೆಗ್ಗಣ್ಣವರವರು…

2 mins ago

ಶ್ರೀನಿವಾಸ್ ಪ್ರಸಾದ್ ಗೆ ನುಡಿ ನಮನ ಸಲ್ಲಿಸಿ ಕಣ್ಣೀರಿಟ್ಟ ಬದನವಾಳು ಗ್ರಾಮಸ್ಥರು

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಸಂಸದ ದಿವಂಗತ ವಿ. ಶ್ರೀನಿವಾಸ್ ಪ್ರಸಾದ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಪ್ರಸಾದ್ ನೆನೆದು…

13 mins ago

ಮೈಸೂರಿನ ಸ್ಪಂದನ ಸೇವಾ ಸಂಸ್ಥೆಯಿಂದ ʼಅಕ್ಷಯ ಅನ್ನʼ ಕಾರ್ಯಕ್ರಮ

ಅಕ್ಷಯ ತೃತೀಯ ಅಂದ್ರೆ ಜನರು ಒಡವೆ ವಸ್ತ್ರ ತಗೋಬೇಕು. ಇದರಿಂದ ನಮ್ಮ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ ಇದೆ. ಈ‌…

25 mins ago

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

30 mins ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

36 mins ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

46 mins ago