ಖಲಿಸ್ತಾನ್: “ಪಂಜಾಬ್ಗಾಗಿ ಹಮಾಸ್ ರೀತಿಯಲ್ಲೇ ದಾಳಿ ನಡೆಸುತ್ತೇವೆ” ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದಿಂದಾರೂ ಬುದ್ಧಿ ಕಲಿತುಕೊಳ್ಳಿ, ಹಮಾಸ್ ಮಾದರಿಯಲ್ಲೇ ನಾವು ದಾಳಿ ನಡೆಸುತ್ತೇವೆ ಎಂದು ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ್ದಾನೆ.
ಇಸ್ರೇಲ್ನಲ್ಲಿ ಹಮಾಸ್ ದಾಳಿಯಿಂದ ಪಾಠ ಕಲುಯುವಂತೆ ಪನ್ನು ಭಾರತ ಸರ್ಕಾರ ಹಾಗೂ ಪಂಜಾಬ್ ಸಿಎಂ ಮಾನ್ಗೆ ಹೇಳಿದ್ದಾನೆ. ಖಲಿಸ್ತಾನಿ ಉಗ್ರ ಪನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ಬೆದರಿಕೆ ಹಾಕಿದ್ದಾನೆ.ಇದು 40 ಸೆಕೆಂಡುಗಳ ವಿಡಿಯೋವಾಗಿದ್ದು, ಪನ್ನು ಭಾರತದ ವಿರುದ್ಧ ವಿಷ ಉಗುಳಿದ್ದಾನೆ.
ನಾವು ಪಂಜಾಬ್ನ್ನು ಭಾರತದ ಭಾಗವೆಂದು ಪರಿಗಣಿಸುವುದಿಲ್ಲ ಅದನ್ನು ಭಾರತದಿಂದ ಮುಕ್ತಗೊಳಿಸಲು ಯಾವ ಹಂತಕ್ಕೆ ಬೇಕಾದರೂ ಇಳಿಯುತ್ತೇವೆ. ಪಂಜಾಬ್ನಲ್ಲಿ ವಾಸಿಸುವ ಜನರು ಪ್ಯಾಲೆಸ್ತೀನ್ನಂತೆ ಹಿಂಸಾಚಾರವನ್ನು ಪ್ರಾರಂಭಿಸಿದರೆ ಪರಿಸ್ಥಿತಿ ವಿನಾಶಕಾರಿಯಾಗುತ್ತದೆ ಎಂದು ಹೇಳಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡುತ್ತಿದೆ.
https://twitter.com/i/status/1711651064775381193