News Karnataka Kannada
Tuesday, April 30 2024
ದೇಶ

ಬೀಚ್ ನಲ್ಲಿ ಫೋಸ್ ಕೊಡೋ ನಿಮಗೆ ಮಣಿಪುರ ನೆನಪಿಲ್ವಾ: ಖರ್ಗೆ ಕಿಡಿ

Karge
Photo Credit : News Kannada

ನವದೆಹಲಿ: ದಕ್ಷಿಣ ಭಾರತ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ಭೇಟಿಯ ಸಂದರ್ಭದಲ್ಲಿ ಕ್ಲಿಕ್ಕಿಸಿದ್ದ ಫೋಟೊವನ್ನು ಹಂಚಿಕೊಂಡಿದ್ದರು. ಇದನ್ನು ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದಾರೆ.

ಬೀಚಲ್ಲಿ ಫೋಟೋಶೂಟ್‌ಗೆ ಟೈಮಿದೆ, ಮಣಿಪುರಕ್ಕಿಲ್ಲ ಎಂದು ಪ್ರಧಾನಿ ಮೋದಿ ಗೆ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ದೇವಸ್ಥಾನ ನಿರ್ಮಾಣವಾಗುತ್ತಿರುವ ಸ್ಥಳಗಳಲ್ಲಿ ಮತ್ತು ಬೀಚ್‌ಗಳಲ್ಲಿ ಫೋಟೋಶೂಟ್‌ ಮಾಡಿಸಲು ಪ್ರಧಾನಿ ನರೇಂದ್ರ ಮೋದಿಗೆ ಸಮಯವಿದೆ.

ಆದರೆ ಹಿಂಸಾಚಾರದಿಂದ ಬಳಲುತ್ತಿರುವ ಮಣಿಪುರಕ್ಕೆ ಭೇಟಿ ನೀಡಲು ಸಮಯವಿಲ್ಲ ಎಂದರು.

ಪ್ರಧಾನಿ ಮೋದಿಗೆ ಸಮುದ್ರದಲ್ಲಿ ಈಜಾಡುತ್ತಿರುವ ಫೋಟೋಶೂಟ್‌ಗೆ ಸಮಯವಿದೆ. ಕೇರಳ ಸೇರಿದಂತೆ ದೇವಸ್ಥಾನ ನಿರ್ಮಾಣವಾಗುತ್ತಿರುವ ಎಲ್ಲ ಕಡೆ ಅವರ ಫೋಟೋಗಳನ್ನು ನೋಡಬಹುದು. ಆದರೆ ಮಣಿಪುರದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಅಲ್ಲಿ ಜನ ಸಾಯುತ್ತಿದ್ದಾರೆ. ಆ ಮಹಾಪುರುಷ ಅಲ್ಲಿಗೆ ಏಕೆ ಹೋಗಲ್ಲ? ಅದು ದೇಶದ ಭಾಗವಲ್ಲವೇ?’ ಎಂದು ಕಿಡಿಕಾರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು