Categories: ದೇಶ

ಬ್ಯುಸಿನೆಸ್ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಲೋನ್

ದೆಹಲಿ: ಪ್ರಧಾನಿ ಮೋದಿಯವರು ಜಾರಿಗೆ ತಂದ ಹಲವು ಪ್ರಮುಖ ಯೋಜನೆಗಳಲ್ಲಿ ಸ್ಟ್ಯಾಂಡ್ ಅಪ್ ಇಂಡಿಯಾ ಕೂಡ ಒಂದು. ಮಹಿಳೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗಾಗಿ ಈ ಯೋಜನೆಯನ್ನು ಮೀಸಲಿರಿಸಲಾಗಿದೆ.

ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ಪ್ರಮುಖ ಉದ್ದೇಶವೇನೆಂದರೆ ಯಾವುದೇ ಬ್ಯಾಂಕಿನ ಸಾಲಗಳಲ್ಲಿ ರೂ. 10 ಲಕ್ಷದಿಂದ 1 ಕೋಟಿವರೆಗಿನ ಸಾಲಗಳಲ್ಲಿ ಒಂದು ಸಾಲವನ್ನು ಮಹಿಳಾ ಉದ್ಯೋಗದಾತರಿಗೆ, ಇಲ್ಲವೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ನೀಡಲೇಬೇಕೆಂದು ನಿರ್ಧರಿಸಲಾಗಿದೆ.

ಇದು ಉತ್ಪಾದನೆ, ಸೇವೆ, ವ್ಯಾಪಾರ ಈ ಮೂರೂ ಕ್ಷೇತ್ರಕ್ಕೆ ಅನ್ವಯಿಸಲಾಗಿರುತ್ತದೆ. ಒಂದು ವೇಳೆ ಇದು ಪಾಲುದಾರಿಕಾ ಸಂಸ್ಥೆಯಾಗಿದ್ದರೆ ಶೇ. 51 ರಷ್ಟು ಪಾಲುದಾರಿಕೆಯನ್ನು ಮಹಿಳೆ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವ್ಯಕ್ತಿ ಹೊಂದಿರಬೇಕಾಗುತ್ತದೆ. ಸಾಲಗಾರ ಯಾವುದೇ ಬ್ಯಾಂಕಿನ ಸದಸ್ಯ ಆಗಿರಬಾರದು.

₹10 ಲಕ್ಷದಿಂದ ₹1 ಕೋಟಿವರೆಗೆ ಇದು ಕಾಂಪೋಸಿಟ್ ಸಾಲವಾಗಿರುತ್ತದೆ. ಅಂದರೆ, ಕರಾರು ಸಾಲ ಮತ್ತು ಕಾರ್ಯವಾಹಿ ಬಂಡವಾಳ ಎರಡೂ ಅನ್ವಯವಾಗುತ್ತದೆ. ಸಾಲದ ಉದ್ದೇಶ ಮಹಿಳೆ/ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವ್ಯಕ್ತಿಗಳಿಂದ ಹೊಸ ಸಂಸ್ಥೆಗಳನ್ನು ಹುಟ್ಟು ಹಾಕುವುದು ಮತ್ತು ಅವರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಬ್ಯಾಂಕಿನ ಅತ್ಯಂತ ಕಡಿಮೆ ಬಡ್ಡಿದರವನ್ನು ಇದು ಒಳಗೊಂಡಿರುತ್ತದೆ.

ಸಾಲ ಪಡೆದ ದಿನದಿಂದ ಕಡಿಮೆ ಎಂದರೆ 18 ತಿಂಗಳಿನಿಂದ 7 ನೇ ವರ್ಷದ ಅಂತ್ಯದೊಳಗೆ ಬಡ್ಡಿ ಸಹಿತ ಸಂಪೂರ್ಣ ಸಾಲ ಮರುಪಾವತಿಯಾಗಬೇಕು. ಇನ್ನು ರೂ. 10 ಲಕ್ಷದ ವರೆಗಿನ ಸಾಲವನ್ನು ಒವರ್ ಡ್ರಾಫ್ಟ್ ರೂಪದಲ್ಲಿಯೂ ಅದಕ್ಕಿಂತ ಹೆಚ್ಚಿನ ಸಾಲವನ್ನು ಕ್ಯಾಷ್ ಕ್ರೆಡಿಟ್ ಲಿಮಿಟ್ ಆಧಾರದಲ್ಲಿ ನೀಡಲಾಗುತ್ತದೆ. ರುಪೇ ಕ್ರೆಡಿಟ್ ಕಾರ್ಡ್ ನ್ನು ಸಾಲ ಪಡೆದ ವ್ಯಕ್ತಿಗೆ ಸುಲಭದ ವ್ಯವಹಾರಕ್ಕಾಗಿ ನೀಡಲಾಗುತ್ತದೆ.

 

 

 

Ashitha S

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

22 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

29 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

41 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

51 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

1 hour ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

2 hours ago